ಇಂದು ಬೆಳ್ಳಂಬೆಳಗ್ಗೆ ಮಗ್ಗದ ಮನೆಯಲ್ಲಿ ಕಳ್ಳತನ; ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ ಕಳ್ಳರು

ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.

ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು‌ ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.

ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago