ಇಂದು ಬೆಳ್ಳಂಬೆಳಗ್ಗೆ ಮಗ್ಗದ ಮನೆಯಲ್ಲಿ ಕಳ್ಳತನ; ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ ಕಳ್ಳರು

ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.

ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು‌ ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.

ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

8 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

9 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

18 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago