ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.
ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.
ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…