“ಇಂದು ಭಾರತ ಚಕ್ರವ್ಯೂಹದಲ್ಲಿ ಸಿಲುಕಿದೆ”- ಇದು ಕಮಲದ ರೂಪದಲ್ಲಿದೆ- ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ-ವಿಪಕ್ಷ ನಾಯಕ ರಾಹುಲ್ ಗಾಧಿ ವಾಗ್ದಾಳಿ: ಯಾರು ಚಕ್ರವ್ಯೂಹದ ರೂವಾರಿಗಳು…?

ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ ಬಗ್ಗೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪಾಲ್ಗೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರದ ಭಾಷಣ ಮಾಡಿದ್ದಾರೆ.

ಚಕ್ರವ್ಯೂಹದ ಕುರಿತು ರಾಹುಲ್ ಗಾಂಧಿ ಹೇಳಿಕೆ ನಂತರ ಲೋಕಸಭೆಯಲ್ಲಿ ಭಾರೀ ಕೋಲಾಹಲ‌ ಸೃಷ್ಟಿಯಾಯಿತು. “ಸಾವಿರಾರು ವರ್ಷಗಳ ಹಿಂದೆ ಕುರುಕ್ಷೇತ್ರ ಚಕ್ರವ್ಯೂಹದಲ್ಲಿ ಯುವಕ ಅಭಿಮನ್ಯುವನ್ನು ಸಿಲುಕಿಸಿ 6 ಜನರು ಕೊಂದರು”. ನಾನು ಸ್ವಲ್ಪ ಸಂಶೋಧನೆ ಮಾಡಿದ್ದೇನೆ ಮತ್ತು ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದು ಕೂಡ ಕರೆಯುತ್ತಾರೆ. ಅದು ಕಮಲದ ರೂಪದಲ್ಲಿ ಇರುತ್ತದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮುಂದುವರಿದು 21 ನೇ ಶತಮಾನದಲ್ಲಿ ಭಾರತದಲ್ಲಿ ಒಂದು ಹೊಸ ‘ಚಕ್ರವ್ಯೂಹ’ ರೂಪುಗೊಂಡಿದೆ. ಅದು ಕೂಡ ಕಮಲದ ರೂಪದಲ್ಲಿಯೇ ತನ್ನ ಚಿಹ್ನೆಯನ್ನು ಧರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಎದೆಯ ಮೇಲೆ ಧರಿಸಿರುತ್ತಾರೆ. ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ. ಅವರು ಯಾರೆಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಉದ್ಯಮಿಗಳಾದ ಮುಖೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಇದ್ದಾರೆ ಎಂದು ಕೇಂದ್ರ ಸರ್ಕಾರಕ್ಕೆ ಟಾಂಗ್‌ ನೀಡುವ ಪ್ರಯತ್ನವನ್ನು ಮಾಡಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

4 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago