“ಇಂದು ಭಾರತ ಚಕ್ರವ್ಯೂಹದಲ್ಲಿ ಸಿಲುಕಿದೆ”- ಇದು ಕಮಲದ ರೂಪದಲ್ಲಿದೆ- ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ-ವಿಪಕ್ಷ ನಾಯಕ ರಾಹುಲ್ ಗಾಧಿ ವಾಗ್ದಾಳಿ: ಯಾರು ಚಕ್ರವ್ಯೂಹದ ರೂವಾರಿಗಳು…?

ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ ಬಗ್ಗೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪಾಲ್ಗೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರದ ಭಾಷಣ ಮಾಡಿದ್ದಾರೆ.

ಚಕ್ರವ್ಯೂಹದ ಕುರಿತು ರಾಹುಲ್ ಗಾಂಧಿ ಹೇಳಿಕೆ ನಂತರ ಲೋಕಸಭೆಯಲ್ಲಿ ಭಾರೀ ಕೋಲಾಹಲ‌ ಸೃಷ್ಟಿಯಾಯಿತು. “ಸಾವಿರಾರು ವರ್ಷಗಳ ಹಿಂದೆ ಕುರುಕ್ಷೇತ್ರ ಚಕ್ರವ್ಯೂಹದಲ್ಲಿ ಯುವಕ ಅಭಿಮನ್ಯುವನ್ನು ಸಿಲುಕಿಸಿ 6 ಜನರು ಕೊಂದರು”. ನಾನು ಸ್ವಲ್ಪ ಸಂಶೋಧನೆ ಮಾಡಿದ್ದೇನೆ ಮತ್ತು ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದು ಕೂಡ ಕರೆಯುತ್ತಾರೆ. ಅದು ಕಮಲದ ರೂಪದಲ್ಲಿ ಇರುತ್ತದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮುಂದುವರಿದು 21 ನೇ ಶತಮಾನದಲ್ಲಿ ಭಾರತದಲ್ಲಿ ಒಂದು ಹೊಸ ‘ಚಕ್ರವ್ಯೂಹ’ ರೂಪುಗೊಂಡಿದೆ. ಅದು ಕೂಡ ಕಮಲದ ರೂಪದಲ್ಲಿಯೇ ತನ್ನ ಚಿಹ್ನೆಯನ್ನು ಧರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಎದೆಯ ಮೇಲೆ ಧರಿಸಿರುತ್ತಾರೆ. ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ. ಅವರು ಯಾರೆಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಉದ್ಯಮಿಗಳಾದ ಮುಖೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಇದ್ದಾರೆ ಎಂದು ಕೇಂದ್ರ ಸರ್ಕಾರಕ್ಕೆ ಟಾಂಗ್‌ ನೀಡುವ ಪ್ರಯತ್ನವನ್ನು ಮಾಡಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

1 hour ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

3 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago