“ಇಂದು ಭಾರತ ಚಕ್ರವ್ಯೂಹದಲ್ಲಿ ಸಿಲುಕಿದೆ”- ಇದು ಕಮಲದ ರೂಪದಲ್ಲಿದೆ- ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ-ವಿಪಕ್ಷ ನಾಯಕ ರಾಹುಲ್ ಗಾಧಿ ವಾಗ್ದಾಳಿ: ಯಾರು ಚಕ್ರವ್ಯೂಹದ ರೂವಾರಿಗಳು…?

ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ ಬಗ್ಗೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪಾಲ್ಗೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರದ ಭಾಷಣ ಮಾಡಿದ್ದಾರೆ.

ಚಕ್ರವ್ಯೂಹದ ಕುರಿತು ರಾಹುಲ್ ಗಾಂಧಿ ಹೇಳಿಕೆ ನಂತರ ಲೋಕಸಭೆಯಲ್ಲಿ ಭಾರೀ ಕೋಲಾಹಲ‌ ಸೃಷ್ಟಿಯಾಯಿತು. “ಸಾವಿರಾರು ವರ್ಷಗಳ ಹಿಂದೆ ಕುರುಕ್ಷೇತ್ರ ಚಕ್ರವ್ಯೂಹದಲ್ಲಿ ಯುವಕ ಅಭಿಮನ್ಯುವನ್ನು ಸಿಲುಕಿಸಿ 6 ಜನರು ಕೊಂದರು”. ನಾನು ಸ್ವಲ್ಪ ಸಂಶೋಧನೆ ಮಾಡಿದ್ದೇನೆ ಮತ್ತು ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದು ಕೂಡ ಕರೆಯುತ್ತಾರೆ. ಅದು ಕಮಲದ ರೂಪದಲ್ಲಿ ಇರುತ್ತದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮುಂದುವರಿದು 21 ನೇ ಶತಮಾನದಲ್ಲಿ ಭಾರತದಲ್ಲಿ ಒಂದು ಹೊಸ ‘ಚಕ್ರವ್ಯೂಹ’ ರೂಪುಗೊಂಡಿದೆ. ಅದು ಕೂಡ ಕಮಲದ ರೂಪದಲ್ಲಿಯೇ ತನ್ನ ಚಿಹ್ನೆಯನ್ನು ಧರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಎದೆಯ ಮೇಲೆ ಧರಿಸಿರುತ್ತಾರೆ. ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ. ಅವರು ಯಾರೆಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಉದ್ಯಮಿಗಳಾದ ಮುಖೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಇದ್ದಾರೆ ಎಂದು ಕೇಂದ್ರ ಸರ್ಕಾರಕ್ಕೆ ಟಾಂಗ್‌ ನೀಡುವ ಪ್ರಯತ್ನವನ್ನು ಮಾಡಿದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 hour ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

5 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

5 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

7 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

9 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

21 hours ago