ಮೆಜೆಸ್ಟಿಕ್ ನಲ್ಲಿ ಜಮಾಯಿಸಿರುವ ಕೆಎಸ್ಆರ್ ಟಿಸಿ ಬಸ್ ಗಳು. ಮಹಿಳೆಯರಿಗೆ ಪಿಂಕ್ ಕಲರ್ ನಿಂದ ಕೂಡಿರುವ ವಿಶೇಷ ಟಿಕೆಟ್ ರೆಡಿ ಆಗಿದೆ. ಟಿಕೆಟ್ ನೀಡುವ ವಿದ್ಯುತ್ ಯಂತ್ರ ಕೆಟ್ಟೋದಾಗ ಮಾತ್ರ ಕೊಡುವಂತ ಟಿಕೆಟ್ ಇದು. ಕೆಎಸ್ಆರ್ ಟಿಸಿ ವತಿಯಿಂದ ಟಿಕೆಟ್ ಅನಾವರಣ ಮಾಡಲಾಗಿದೆ. ಕೆಎಸ್ಆರ್ ಟಿಸಿಯಲ್ಲಿ ಲಾಂಗ್ ರೂಟ್ ಬಸ್ ಗಳಿಗೆ ಮಾತ್ರ ಈ ಟಿಕೆಟ್ ಅನ್ವಯ ಆಗುತ್ತದೆ.
ಇಂದು ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಬೆಳಿಗ್ಗೆ 11ಕ್ಕೆ ವಿಧಾನಸೌಧದ ಪೂರ್ವದ್ವಾರದ ಮುಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಲಿದ್ದು, ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ಬಿಎಂಟಿಸಿಯ 2 ಬಸ್ ಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಆಗಮಿಸುವರು. ಮೆಜೆಸ್ಟಿಕ್ ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಪ್ರಯಾಣಿಕರಿಗೆ ಶೂನ್ಯ ದರದ ಟಿಕೆಟ್ ವಿತರಿಸುವರು.
ಈ ವೇಳೆ ಡಿಸಿಎಂ ಡಿಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತ ಮತ್ತಿತರರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…