ಮೆಜೆಸ್ಟಿಕ್ ನಲ್ಲಿ ಜಮಾಯಿಸಿರುವ ಕೆಎಸ್ಆರ್ ಟಿಸಿ ಬಸ್ ಗಳು. ಮಹಿಳೆಯರಿಗೆ ಪಿಂಕ್ ಕಲರ್ ನಿಂದ ಕೂಡಿರುವ ವಿಶೇಷ ಟಿಕೆಟ್ ರೆಡಿ ಆಗಿದೆ. ಟಿಕೆಟ್ ನೀಡುವ ವಿದ್ಯುತ್ ಯಂತ್ರ ಕೆಟ್ಟೋದಾಗ ಮಾತ್ರ ಕೊಡುವಂತ ಟಿಕೆಟ್ ಇದು. ಕೆಎಸ್ಆರ್ ಟಿಸಿ ವತಿಯಿಂದ ಟಿಕೆಟ್ ಅನಾವರಣ ಮಾಡಲಾಗಿದೆ. ಕೆಎಸ್ಆರ್ ಟಿಸಿಯಲ್ಲಿ ಲಾಂಗ್ ರೂಟ್ ಬಸ್ ಗಳಿಗೆ ಮಾತ್ರ ಈ ಟಿಕೆಟ್ ಅನ್ವಯ ಆಗುತ್ತದೆ.
ಇಂದು ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಬೆಳಿಗ್ಗೆ 11ಕ್ಕೆ ವಿಧಾನಸೌಧದ ಪೂರ್ವದ್ವಾರದ ಮುಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಲಿದ್ದು, ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ಬಿಎಂಟಿಸಿಯ 2 ಬಸ್ ಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಆಗಮಿಸುವರು. ಮೆಜೆಸ್ಟಿಕ್ ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಪ್ರಯಾಣಿಕರಿಗೆ ಶೂನ್ಯ ದರದ ಟಿಕೆಟ್ ವಿತರಿಸುವರು.
ಈ ವೇಳೆ ಡಿಸಿಎಂ ಡಿಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತ ಮತ್ತಿತರರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…