ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ತಾಲೂಕಿನ ಪುಣ್ಯಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಇಂದು ನಡೆಯಲಿದ್ದು, ಬ್ರಹ್ಮರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಇತರೆ ರಾಜ್ಯಗಳ ನಾನಾ ಮೂಲೆಗಳಿಂದ ಭಕ್ತಾಧಿಗಳು ಸಾಗಾರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.
ಇಂದು ಮುಂಜಾನೆ ಸುಮಾರು 3 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಹಾಗೂ ಲಕ್ಷ್ಮಿ ನರಸಿಂಹ ಸ್ವಾಮಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಭಕ್ತಾಧಿಗಳು ಸರ್ಪದೋಷ ನಿವಾರಣೆಗಾಗಿ ಕ್ಷೇತ್ರದಲ್ಲಿರುವ ನಾಗರ ಕಲ್ಲು, ಹುತ್ತಗಳಿಗೆ ಹಾಲು, ತುಪ್ಪ ಎರೆದು, ಅರಿಶಿಣ ಕುಂಕುಮ ಹಚ್ಚಿ, ವಿಶೇಷ ಪೂಜೆ ಮಾಡುವಲ್ಲಿ ನಿರತರಾಗಿದ್ದಾರೆ.
ಒಟ್ಟಿನಲ್ಲಿ ಘಾಟಿ ಬ್ರಹ್ಮರಥೋತ್ಸವ ಹಿನ್ನೆಲೆ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಸಂಭ್ರಮ, ಸಡಗರ ಮನೆ ಮಾಡಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…