ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.
ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ
ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.
ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.
ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಸಾರಿಗೆ ವ್ಯವಸ್ಥೆ
ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
3738 ಅರ್ಜಿ ವಿಲೇವಾರಿ
ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…