ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ  ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ  ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ   ಎಲ್ಲಾ ಸಾರ್ವಜನಿಕರು  ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

3738 ಅರ್ಜಿ ವಿಲೇವಾರಿ

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

3 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

4 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

17 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

19 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

20 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

24 hours ago