ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ  ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ  ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ   ಎಲ್ಲಾ ಸಾರ್ವಜನಿಕರು  ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

3738 ಅರ್ಜಿ ವಿಲೇವಾರಿ

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

11 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

22 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

24 hours ago