ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ  ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ  ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ   ಎಲ್ಲಾ ಸಾರ್ವಜನಿಕರು  ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

3738 ಅರ್ಜಿ ವಿಲೇವಾರಿ

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago