ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ  ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ  ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ   ಎಲ್ಲಾ ಸಾರ್ವಜನಿಕರು  ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

3738 ಅರ್ಜಿ ವಿಲೇವಾರಿ

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

10 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

10 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

13 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago