ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ  ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ  ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ   ಎಲ್ಲಾ ಸಾರ್ವಜನಿಕರು  ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

3738 ಅರ್ಜಿ ವಿಲೇವಾರಿ

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago