ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ  ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ  ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ   ಎಲ್ಲಾ ಸಾರ್ವಜನಿಕರು  ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

3738 ಅರ್ಜಿ ವಿಲೇವಾರಿ

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago