“ಇಂದೇ ಸಕಾಲ” ಯೋಜನೆಯಡಿ ಹಿರಿಯ ನಾಗರಿಕರ ಗುರುತಿನ ಚೀಟಿಗೆ ಅನುಮೋದನೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸದ್ಯ “ಸಕಾಲ “ಯೋಜನೆಯಡಿ ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ ಆದರೆ  ಸಾಕಷ್ಟು ಹಿರಿಯರು ನಾಗರಿಕರು ಈ ಗುರುತಿನ ಚೀಟಿಯನ್ನು ಪಡೆಯಲು ಎರಡು -ಮೂರು ಬಾರಿ ಪೇಟೆಗಳಿಗೆ ಅಥವಾ ಹೋಬಳಿ ಕೇಂದ್ರಕ್ಕೆ ಬಂದು ಹೋಗಿ ಗುರುತಿನ ಚೀಟಿಯನ್ನು ಪಡೆಯಬೇಕಿದೆ.ಇದರಿಂದ ಹಿರಿಯರಿಗೆ ಆರ್ಥಿಕ ಹೊರೆ ಮತ್ತು ಸಮಯ ವ್ಯರ್ಥವಾಗುತ್ತದೆ ಎಂದು ಸಾಕಷ್ಟು ಹಿರಿಯರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಇಲಾಖೆಯ ಗಮನಕ್ಕೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇಯೋಭಿವೃದ್ದಿಗೆ “ಸಂಗಮ”, “ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನೆ ಮತ್ತು ಕ್ಷೇಮಾಭಿವೃದ್ಧಿ ದಿನ ಆಚರಣೆ ” ಸೇರಿದಂತೆ ಅನೇಕ ವಿನೂತನವಾದ  ಅತ್ಯಅವಶ್ಯಕ ಕಾರ್ಯಕ್ರಮಗಳನ್ನ ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ.

ಹಿರಿಯ ನಾಗರಿಕರ ಯೋಜನೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಹಾಗೂ ಶೀಘ್ರ ತಲುಪಿಸಲು ಹಿರಿಯ ನಾಗರಿಕರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ ದಿನವೇ ಹಿರಿಯರಿಗೆ ಗುರುತಿನ ಚೀಟಿ ಕೈ ಸೇರುವಂತೆ ಮಾಡಲು “ಇಂದೇ ಸಕಾಲ” ಘೋಷ ವಾಕ್ಯದೊಂದಿಗೆ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸುವ ಎಲ್ಲಾ ಹಿರಿಯ ನಾಗರಿಕರ ಅರ್ಜಿಗಳನ್ನು ಎಲ್ಲಾ ಕಚೇರಿ ಕೆಲಸದ ದಿನಗಳಂದು 1.00 ಗಂಟೆಗೆ ಸೇವಾ ಸಿಂಧು ಪೋರ್ಟಲ್ ನ ಸಕಾಲದಲ್ಲಿ ಪರಿಶೀಲಿಸಿ ಅನುಮೋದನೆ ಮಾಡಲಾಗುವುದು.

ಇದೇ ಸಮಯಕ್ಕೆ ಅರ್ಜಿ ಸಲ್ಲಿಸಿದ ಕೇಂದ್ರದಲ್ಲಿ ಸಹಿ ಹೊಂದಿದ ಹಿರಿಯ ನಾಗರಿಕ ಗುರುತಿನ ಚೀಟಿಯನ್ನು ಅದೇ ದಿನ(ಕಚೇರಿ ಕೆಲಸದ ದಿನ) ಸ್ಥಳದಲ್ಲಿಯೆ ಹಿರಿಯ ನಾಗರಿಕರು ಪಡೆಯಬಹುದಾಗಿದೆ.

ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ಯೋಜನೆಯಡಿ ಶೀಘ್ರ ಹಿರಿಯ ನಾಗರಿಕರ ಗುರುತಿನ ಚೀಟಿ ಅನುಕೂಲ ಪಡೆಯಲು ಕೋರಿದೆ .

ಹಿರಿಯ ನಾಗರಿಕರ ಗುರುತಿನ ಚೀಟಿ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗೆ, ಹಿರಿಯ ನಾಗರಿಕರ ಸಹಾಯವಾಣಿ 1090 ಸಂಪರ್ಕಿಸಿ. ಈ ಸಂಬಂಧ ಯಾವುದೇ ಸಮಸ್ಯೆಗಳಿದ್ದರೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ  08029787441 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಎಂ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

8 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

10 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

14 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

15 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

17 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

17 hours ago