ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸದ್ಯ “ಸಕಾಲ “ಯೋಜನೆಯಡಿ ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ ಆದರೆ ಸಾಕಷ್ಟು ಹಿರಿಯರು ನಾಗರಿಕರು ಈ ಗುರುತಿನ ಚೀಟಿಯನ್ನು ಪಡೆಯಲು ಎರಡು -ಮೂರು ಬಾರಿ ಪೇಟೆಗಳಿಗೆ ಅಥವಾ ಹೋಬಳಿ ಕೇಂದ್ರಕ್ಕೆ ಬಂದು ಹೋಗಿ ಗುರುತಿನ ಚೀಟಿಯನ್ನು ಪಡೆಯಬೇಕಿದೆ.ಇದರಿಂದ ಹಿರಿಯರಿಗೆ ಆರ್ಥಿಕ ಹೊರೆ ಮತ್ತು ಸಮಯ ವ್ಯರ್ಥವಾಗುತ್ತದೆ ಎಂದು ಸಾಕಷ್ಟು ಹಿರಿಯರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಇಲಾಖೆಯ ಗಮನಕ್ಕೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇಯೋಭಿವೃದ್ದಿಗೆ “ಸಂಗಮ”, “ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನೆ ಮತ್ತು ಕ್ಷೇಮಾಭಿವೃದ್ಧಿ ದಿನ ಆಚರಣೆ ” ಸೇರಿದಂತೆ ಅನೇಕ ವಿನೂತನವಾದ ಅತ್ಯಅವಶ್ಯಕ ಕಾರ್ಯಕ್ರಮಗಳನ್ನ ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ.
ಹಿರಿಯ ನಾಗರಿಕರ ಯೋಜನೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಹಾಗೂ ಶೀಘ್ರ ತಲುಪಿಸಲು ಹಿರಿಯ ನಾಗರಿಕರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ ದಿನವೇ ಹಿರಿಯರಿಗೆ ಗುರುತಿನ ಚೀಟಿ ಕೈ ಸೇರುವಂತೆ ಮಾಡಲು “ಇಂದೇ ಸಕಾಲ” ಘೋಷ ವಾಕ್ಯದೊಂದಿಗೆ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸುವ ಎಲ್ಲಾ ಹಿರಿಯ ನಾಗರಿಕರ ಅರ್ಜಿಗಳನ್ನು ಎಲ್ಲಾ ಕಚೇರಿ ಕೆಲಸದ ದಿನಗಳಂದು 1.00 ಗಂಟೆಗೆ ಸೇವಾ ಸಿಂಧು ಪೋರ್ಟಲ್ ನ ಸಕಾಲದಲ್ಲಿ ಪರಿಶೀಲಿಸಿ ಅನುಮೋದನೆ ಮಾಡಲಾಗುವುದು.
ಇದೇ ಸಮಯಕ್ಕೆ ಅರ್ಜಿ ಸಲ್ಲಿಸಿದ ಕೇಂದ್ರದಲ್ಲಿ ಸಹಿ ಹೊಂದಿದ ಹಿರಿಯ ನಾಗರಿಕ ಗುರುತಿನ ಚೀಟಿಯನ್ನು ಅದೇ ದಿನ(ಕಚೇರಿ ಕೆಲಸದ ದಿನ) ಸ್ಥಳದಲ್ಲಿಯೆ ಹಿರಿಯ ನಾಗರಿಕರು ಪಡೆಯಬಹುದಾಗಿದೆ.
ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ಯೋಜನೆಯಡಿ ಶೀಘ್ರ ಹಿರಿಯ ನಾಗರಿಕರ ಗುರುತಿನ ಚೀಟಿ ಅನುಕೂಲ ಪಡೆಯಲು ಕೋರಿದೆ .
ಹಿರಿಯ ನಾಗರಿಕರ ಗುರುತಿನ ಚೀಟಿ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗೆ, ಹಿರಿಯ ನಾಗರಿಕರ ಸಹಾಯವಾಣಿ 1090 ಸಂಪರ್ಕಿಸಿ. ಈ ಸಂಬಂಧ ಯಾವುದೇ ಸಮಸ್ಯೆಗಳಿದ್ದರೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ 08029787441 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಎಂ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…