ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸದ್ಯ “ಸಕಾಲ “ಯೋಜನೆಯಡಿ ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ ಆದರೆ ಸಾಕಷ್ಟು ಹಿರಿಯರು ನಾಗರಿಕರು ಈ ಗುರುತಿನ ಚೀಟಿಯನ್ನು ಪಡೆಯಲು ಎರಡು -ಮೂರು ಬಾರಿ ಪೇಟೆಗಳಿಗೆ ಅಥವಾ ಹೋಬಳಿ ಕೇಂದ್ರಕ್ಕೆ ಬಂದು ಹೋಗಿ ಗುರುತಿನ ಚೀಟಿಯನ್ನು ಪಡೆಯಬೇಕಿದೆ.ಇದರಿಂದ ಹಿರಿಯರಿಗೆ ಆರ್ಥಿಕ ಹೊರೆ ಮತ್ತು ಸಮಯ ವ್ಯರ್ಥವಾಗುತ್ತದೆ ಎಂದು ಸಾಕಷ್ಟು ಹಿರಿಯರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಇಲಾಖೆಯ ಗಮನಕ್ಕೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇಯೋಭಿವೃದ್ದಿಗೆ “ಸಂಗಮ”, “ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನೆ ಮತ್ತು ಕ್ಷೇಮಾಭಿವೃದ್ಧಿ ದಿನ ಆಚರಣೆ ” ಸೇರಿದಂತೆ ಅನೇಕ ವಿನೂತನವಾದ ಅತ್ಯಅವಶ್ಯಕ ಕಾರ್ಯಕ್ರಮಗಳನ್ನ ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ.
ಹಿರಿಯ ನಾಗರಿಕರ ಯೋಜನೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಹಾಗೂ ಶೀಘ್ರ ತಲುಪಿಸಲು ಹಿರಿಯ ನಾಗರಿಕರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ ದಿನವೇ ಹಿರಿಯರಿಗೆ ಗುರುತಿನ ಚೀಟಿ ಕೈ ಸೇರುವಂತೆ ಮಾಡಲು “ಇಂದೇ ಸಕಾಲ” ಘೋಷ ವಾಕ್ಯದೊಂದಿಗೆ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸುವ ಎಲ್ಲಾ ಹಿರಿಯ ನಾಗರಿಕರ ಅರ್ಜಿಗಳನ್ನು ಎಲ್ಲಾ ಕಚೇರಿ ಕೆಲಸದ ದಿನಗಳಂದು 1.00 ಗಂಟೆಗೆ ಸೇವಾ ಸಿಂಧು ಪೋರ್ಟಲ್ ನ ಸಕಾಲದಲ್ಲಿ ಪರಿಶೀಲಿಸಿ ಅನುಮೋದನೆ ಮಾಡಲಾಗುವುದು.
ಇದೇ ಸಮಯಕ್ಕೆ ಅರ್ಜಿ ಸಲ್ಲಿಸಿದ ಕೇಂದ್ರದಲ್ಲಿ ಸಹಿ ಹೊಂದಿದ ಹಿರಿಯ ನಾಗರಿಕ ಗುರುತಿನ ಚೀಟಿಯನ್ನು ಅದೇ ದಿನ(ಕಚೇರಿ ಕೆಲಸದ ದಿನ) ಸ್ಥಳದಲ್ಲಿಯೆ ಹಿರಿಯ ನಾಗರಿಕರು ಪಡೆಯಬಹುದಾಗಿದೆ.
ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ಯೋಜನೆಯಡಿ ಶೀಘ್ರ ಹಿರಿಯ ನಾಗರಿಕರ ಗುರುತಿನ ಚೀಟಿ ಅನುಕೂಲ ಪಡೆಯಲು ಕೋರಿದೆ .
ಹಿರಿಯ ನಾಗರಿಕರ ಗುರುತಿನ ಚೀಟಿ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗೆ, ಹಿರಿಯ ನಾಗರಿಕರ ಸಹಾಯವಾಣಿ 1090 ಸಂಪರ್ಕಿಸಿ. ಈ ಸಂಬಂಧ ಯಾವುದೇ ಸಮಸ್ಯೆಗಳಿದ್ದರೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ 08029787441 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಎಂ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…