ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಲ್‌ಪಿಜಿ ಗ್ಯಾಸ್, ವಾಣಿಜ್ಯ ಗ್ಯಾಸ್ ಸಿಲಿಂಡರ್, ಸಿಎನ್‌ಜಿ, ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆ ಮಾಡುವ ಜವಾಬ್ದಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮೂಲಕ ಈ ವ್ಯವಸ್ಥೆ ನಡೆಯುತ್ತದೆ. ರಾಜ್ಯ ಸರ್ಕಾರಕ್ಕೆ ಈ ಪೂರೈಕೆಯನ್ನು ನೇರವಾಗಿ ನಿಯಂತ್ರಿಸುವ ಅಧಿಕಾರವಿಲ್ಲ ಎಂಬುದು ಸಾರ್ವಜನಿಕರು ಗಮನಿಸಬೇಕಾದ ವಿಷಯವಾಗಿದೆ ಎಂದರು.

ಈ ಮಧ್ಯೆ, ಪಶ್ಚಿಮ ಏಷ್ಯಾ (ಕೊಲ್ಲಿ ರಾಷ್ಟ್ರಗಳು) ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಸರಬರಾಜು ವ್ಯತ್ಯಯಗೊಂಡಿದೆ. ಅದರ ಪರಿಣಾಮ ದೇಶದೊಳಗೂ ತೀವ್ರವಾಗಿ ಕಾಣಿಸುತ್ತಿದ್ದು, ಕರ್ನಾಟಕದಲ್ಲಿಯೂ ಎಲ್‌ಪಿಜಿ ಗ್ಯಾಸ್ ಹಾಗೂ ಇಂಧನ ಕೊರತೆ ಉಂಟಾಗಿದೆ. ಇದರಿಂದ ಜನರ ದೈನಂದಿನ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.

ಸಿಎನ್‌ಜಿ ಕೊರತೆಯಿಂದ ಸಂಕಷ್ಟದಲ್ಲಿರುವ ಆಟೋ ಚಾಲಕರುಮ ವಾಣಿಜ್ಯ ಗ್ಯಾಸ್ ಕೊರತೆಯಿಂದ ತೊಂದರೆ ಅನುಭವಿಸುತ್ತಿರುವ ಹೊಟೇಲ್ ಮತ್ತು ಆಹಾರ ಉದ್ಯಮಗಳು. ಅಡುಗೆಗೆ ಗ್ಯಾಸ್ ಸಿಗದೆ ಪರದಾಡುತ್ತಿರುವ ಗೃಹಿಣಿಯರು. ಈ ಎಲ್ಲವನ್ನು ಗಮನಿಸಿದಾಗ, ಕೇಂದ್ರ ಸರ್ಕಾರವು ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ವಿದೇಶಾಂಗ ನೀತಿ ಮತ್ತು ಇಂಧನ ನಿರ್ವಹಣೆಯ ನಡುವೆ ಸಮನ್ವಯದ ಕೊರತೆ ಕಾಣಿಸಿಕೊಂಡಿದ್ದು, ಅದರ ಹೊರೆ ಜನರ ಮೇಲೆ ಬಿದ್ದಿದೆ ಎಂದರು.

ಇದಲ್ಲದೆ, ಇಂಧನ ಪೂರೈಕೆಯಲ್ಲಿ ರಾಜ್ಯಗಳ ನಡುವೆ ಸಮಾನತೆ ಕಾಣುತ್ತಿಲ್ಲ ಎಂಬ ಅಂಶವೂ ಗಮನಕ್ಕೆ ಬಂದಿದೆ. ಕೆಲವು ರಾಜ್ಯಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿರುವಂತಿದೆ. ಕರ್ನಾಟಕ ರಾಜ್ಯದೊಂದಿಗೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನರು ಅನಗತ್ಯ ಸಂಕಷ್ಟ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ..

ಈ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ತಕ್ಷಣ ಇಂಧನ ಮತ್ತು ಅನಿಲ ಪೂರೈಕೆಯನ್ನು ಹೆಚ್ಚಿಸಲು ರಾಜ್ಯಗಳ ನಡುವೆ ಸಮಾನ ಹಂಚಿಕೆ ಖಚಿತಪಡಿಸಲು ಕರ್ನಾಟಕಕ್ಕೆ ಅಗತ್ಯ ಆದ್ಯತೆ ನೀಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ ಒತಾಯಿಸುತ್ತದೆ ಎಂದರು.

ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಈ ವಿಷಯದ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದಿದ್ದಾರೆ. ಅದೇ ರೀತಿ, ನಾನು ಸಹ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದು ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ..

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

8 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

18 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

21 hours ago

Instant Play Casino

Instant play casinos allow you to play casino games online without installing any software. These…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago