ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಲ್‌ಪಿಜಿ ಗ್ಯಾಸ್, ವಾಣಿಜ್ಯ ಗ್ಯಾಸ್ ಸಿಲಿಂಡರ್, ಸಿಎನ್‌ಜಿ, ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆ ಮಾಡುವ ಜವಾಬ್ದಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮೂಲಕ ಈ ವ್ಯವಸ್ಥೆ ನಡೆಯುತ್ತದೆ. ರಾಜ್ಯ ಸರ್ಕಾರಕ್ಕೆ ಈ ಪೂರೈಕೆಯನ್ನು ನೇರವಾಗಿ ನಿಯಂತ್ರಿಸುವ ಅಧಿಕಾರವಿಲ್ಲ ಎಂಬುದು ಸಾರ್ವಜನಿಕರು ಗಮನಿಸಬೇಕಾದ ವಿಷಯವಾಗಿದೆ ಎಂದರು.

ಈ ಮಧ್ಯೆ, ಪಶ್ಚಿಮ ಏಷ್ಯಾ (ಕೊಲ್ಲಿ ರಾಷ್ಟ್ರಗಳು) ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಸರಬರಾಜು ವ್ಯತ್ಯಯಗೊಂಡಿದೆ. ಅದರ ಪರಿಣಾಮ ದೇಶದೊಳಗೂ ತೀವ್ರವಾಗಿ ಕಾಣಿಸುತ್ತಿದ್ದು, ಕರ್ನಾಟಕದಲ್ಲಿಯೂ ಎಲ್‌ಪಿಜಿ ಗ್ಯಾಸ್ ಹಾಗೂ ಇಂಧನ ಕೊರತೆ ಉಂಟಾಗಿದೆ. ಇದರಿಂದ ಜನರ ದೈನಂದಿನ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.

ಸಿಎನ್‌ಜಿ ಕೊರತೆಯಿಂದ ಸಂಕಷ್ಟದಲ್ಲಿರುವ ಆಟೋ ಚಾಲಕರುಮ ವಾಣಿಜ್ಯ ಗ್ಯಾಸ್ ಕೊರತೆಯಿಂದ ತೊಂದರೆ ಅನುಭವಿಸುತ್ತಿರುವ ಹೊಟೇಲ್ ಮತ್ತು ಆಹಾರ ಉದ್ಯಮಗಳು. ಅಡುಗೆಗೆ ಗ್ಯಾಸ್ ಸಿಗದೆ ಪರದಾಡುತ್ತಿರುವ ಗೃಹಿಣಿಯರು. ಈ ಎಲ್ಲವನ್ನು ಗಮನಿಸಿದಾಗ, ಕೇಂದ್ರ ಸರ್ಕಾರವು ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ವಿದೇಶಾಂಗ ನೀತಿ ಮತ್ತು ಇಂಧನ ನಿರ್ವಹಣೆಯ ನಡುವೆ ಸಮನ್ವಯದ ಕೊರತೆ ಕಾಣಿಸಿಕೊಂಡಿದ್ದು, ಅದರ ಹೊರೆ ಜನರ ಮೇಲೆ ಬಿದ್ದಿದೆ ಎಂದರು.

ಇದಲ್ಲದೆ, ಇಂಧನ ಪೂರೈಕೆಯಲ್ಲಿ ರಾಜ್ಯಗಳ ನಡುವೆ ಸಮಾನತೆ ಕಾಣುತ್ತಿಲ್ಲ ಎಂಬ ಅಂಶವೂ ಗಮನಕ್ಕೆ ಬಂದಿದೆ. ಕೆಲವು ರಾಜ್ಯಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿರುವಂತಿದೆ. ಕರ್ನಾಟಕ ರಾಜ್ಯದೊಂದಿಗೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನರು ಅನಗತ್ಯ ಸಂಕಷ್ಟ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ..

ಈ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ತಕ್ಷಣ ಇಂಧನ ಮತ್ತು ಅನಿಲ ಪೂರೈಕೆಯನ್ನು ಹೆಚ್ಚಿಸಲು ರಾಜ್ಯಗಳ ನಡುವೆ ಸಮಾನ ಹಂಚಿಕೆ ಖಚಿತಪಡಿಸಲು ಕರ್ನಾಟಕಕ್ಕೆ ಅಗತ್ಯ ಆದ್ಯತೆ ನೀಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ ಒತಾಯಿಸುತ್ತದೆ ಎಂದರು.

ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಈ ವಿಷಯದ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದಿದ್ದಾರೆ. ಅದೇ ರೀತಿ, ನಾನು ಸಹ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದು ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ..

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

18 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

20 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

20 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago