ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

 

ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ ಪಕ್ಷದ ಕಾರ್ಯಕರ್ತರು ಮಂಗಳವಾರ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ತಿಂಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿದರು. ಕೇವಲ 11 ದಿನಗಳ ಅಂತರದಲ್ಲಿ ನಾಲ್ಕು ಬಾರಿ ಇಂಧನ ದರ ಏರಿಕೆಯಾಗಿರುವುದು ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ತಂದಿದ್ದು, ಜನರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೇ ತಿಂಗಳಲ್ಲಿ ಕಚ್ಚಾ ತೈಲದ ಬೆಲೆ ಶೇ.20ರಷ್ಟು ಇಳಿಕೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಬಡವರು, ದೀನದಲಿತರು, ಅಲ್ಪಸಂಖ್ಯಾತರು, ಕೂಲಿಕಾರ್ಮಿಕರು, ರೈತರು, ನೇಕಾರರು, ಶ್ರಮಿಕರು ಹಾಗೂ ಮಧ್ಯಮ ವರ್ಗದ ಜನರು ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಪಕ್ಷದ ಮುಖಂಡ ಡಿ.ಪಿ. ಆಂಜನೇಯ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ಪರಿಣಾಮವಾಗಿ ಇಂಧನ ದರಗಳು ನಿರಂತರವಾಗಿ ಏರಿಕೆಯಾಗುತ್ತಿವೆ ಎಂದು ಆರೋಪಿಸಿದ ಅವರು ಉದ್ಯೋಗ ಸೃಷ್ಟಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ರೈತರ ಕಲ್ಯಾಣದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದು, ಕಾರ್ಮಿಕರು ತಮ್ಮ ವೇತನ ಮತ್ತು ಹಕ್ಕುಗಳಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ಜನರು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ವೆಂಕಟೇಶ್, ಕುಮಾರ್, ರಮೇಶ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

12 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

1 day ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 day ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 day ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago