ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

 

ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ ಪಕ್ಷದ ಕಾರ್ಯಕರ್ತರು ಮಂಗಳವಾರ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ತಿಂಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿದರು. ಕೇವಲ 11 ದಿನಗಳ ಅಂತರದಲ್ಲಿ ನಾಲ್ಕು ಬಾರಿ ಇಂಧನ ದರ ಏರಿಕೆಯಾಗಿರುವುದು ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ತಂದಿದ್ದು, ಜನರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೇ ತಿಂಗಳಲ್ಲಿ ಕಚ್ಚಾ ತೈಲದ ಬೆಲೆ ಶೇ.20ರಷ್ಟು ಇಳಿಕೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಬಡವರು, ದೀನದಲಿತರು, ಅಲ್ಪಸಂಖ್ಯಾತರು, ಕೂಲಿಕಾರ್ಮಿಕರು, ರೈತರು, ನೇಕಾರರು, ಶ್ರಮಿಕರು ಹಾಗೂ ಮಧ್ಯಮ ವರ್ಗದ ಜನರು ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಪಕ್ಷದ ಮುಖಂಡ ಡಿ.ಪಿ. ಆಂಜನೇಯ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ಪರಿಣಾಮವಾಗಿ ಇಂಧನ ದರಗಳು ನಿರಂತರವಾಗಿ ಏರಿಕೆಯಾಗುತ್ತಿವೆ ಎಂದು ಆರೋಪಿಸಿದ ಅವರು ಉದ್ಯೋಗ ಸೃಷ್ಟಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ರೈತರ ಕಲ್ಯಾಣದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದು, ಕಾರ್ಮಿಕರು ತಮ್ಮ ವೇತನ ಮತ್ತು ಹಕ್ಕುಗಳಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ಜನರು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ವೆಂಕಟೇಶ್, ಕುಮಾರ್, ರಮೇಶ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

19 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

21 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

22 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago