ಇಡೀ ದೇಶದಲ್ಲಿ ಕರ್ನಾಟಕ ಹಲವು ವಲಯಗಳಲ್ಲಿ ಮುನ್ನಡೆಯಲ್ಲಿದೆ-ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ನಗರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ನ ಇನ್ಸ್‌ಟಿಟ್ಯೂಷನ್ಸ್ ಸಹಯೋಗದಲ್ಲಿ ಶುಕ್ರವಾರ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ವಿವಿಧ ಶೈಕ್ಷಣಿಕ ಘಟಕಗಳಲ್ಲಿ ಧ್ವಜಾರೋಹಣ ನೆರವೇರಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಅನನ್ಯತೆಯ ಬಗ್ಗೆ ಹೆಮ್ಮೆ ಪಡುವ ಜೊತೆಗೆ ವಾಸ್ತವ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವುದು ಅಗತ್ಯ. ಭ್ರಷ್ಟಾಚಾರವನ್ನು ನಿಗ್ರಹಿಸಿ ಮುನ್ನಡೆದಾಗ ಮಾತ್ರ ರಾಜ್ಯದ ಅಭಿವೃದ್ದಿ ಸಾಧ್ಯ. ಜಾತಿ, ಮತ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸಗಳು ನಡೆಯುತ್ತಿರುವುದು ಆತಂಕಕಾರಿ. ಸಾಮಾಜಿಕ ಶಾಂತಿ ಮತ್ತು ಸಾಮರಸ್ಯವನ್ನು ರೂಢಿಸಿಕೊಳ್ಳದೇ ಹೋದರೆ ರಾಜ್ಯದ ಪ್ರಗತಿ ಸಾಧ್ಯವಿಲ್ಲ. ಇಂದು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆಯೂ ನಾವು ಕಾಳಜಿ ವಹಿಸಿ, ನ್ಯಾಯದ ಹಾದಿಯಲ್ಲಿ ಅವಕಾಶಗಳನ್ನು ಪಡೆಯುವಂತಾಗಬೇಕು ಎಂದರು.

ಜಿಲ್ಲಾ ಲಯನ್ಸ್‌ ಕನ್ನಡ ಮತ್ತು ಸಂಸ್ಕೃತಿ ಸಂಯೋಜಕರಾದ ನಾಗರತ್ನ ಮಾತನಾಡಿ, ಕನ್ನಡ ನಾಡಿಗೆ ಅನನ್ಯ ಇತಿಹಾಸವಿದೆ. ಹರಿದು ಹಂಚಿ ಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಟ್ಟುಗೂಡಿಸಿ ಕರ್ನಾಟಕದ ಏಕೀಕರಣವಾಯಿತು. ಸಮೃದ್ದವಾದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಕನ್ನಡ ಹೊಂದಿದೆ. ಇಡೀ ದೇಶದಲ್ಲಿ ಕರ್ನಾಟಕ ಹಲವು ವಲಯಗಳಲ್ಲಿ ಮುನ್ನಡೆಯಲ್ಲಿದೆ ಎಂದರು.

ದೇವರಾಜ ಅರಸ್‌ ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಅಂ.ರಾ.ವಸತಿ ಶಾಲೆ ಪ್ರಾಂಶುಪಾಲ ಧನಂಜಯ್‌ ಮಾತನಾಡಿದರು. ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆ.ಆರ್.ರಾಕೇಶ್‌, ಜಿಇಟಿ ಜಿಲ್ಲಾ ಸಂಯೋಜಕ ಎಂ.ಆರ್.ಶ್ರೀನಿವಾಸ್, ಪ್ರಾಂಶುಪಾಲರಾದ ಡಾ.ವಿಜಯ ಕಾರ್ತಿಕ್, ನರಸಿಂಹರೆಡ್ಡಿ, ಮಹಂತೇಶಪ್ಪ, ಜಿಯಾವುಲ್ಲಾಖಾನ್, ಲಯನ್ಸ್‌ ಕ್ಲಬ್ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ಎಸ್.ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

*ಕನ್ನಡ ಪುರಸ್ಕಾರ ಪ್ರದಾನ:*

ಇದೇ ವೇಳೆ ಪ್ರೊ.ಕೆ.ಆರ್.ರವಿಕಿರಣ್, ಡಾ.ಎಂ.ಚಿಕ್ಕಣ್ಣ, ರವಿಕುಮಾರ್, ಎಂ.ಬಿ.ರಮೇಶ್, ಕೆ.ಎಲ್.ಸ್ವರ್ಣ, ಎಂ.ಎನ್.ಸತ್ಯನಾರಾಯಣರಾವ್, ಬಿ.ಎಂ.ಸತೀಶ್‌ಕುಮಾರ್, ದೇವರಾಜ್, ಬಿ.ರಜನಿ, ಎಸ್.ಮಂಜುಳಾ, ಟಿ.ಸತ್ಯವತಿ, ಎ.ಕಿರಣ್, ಮಾಲತಿ, ವೆಂಕಟೇಶ್, ಮಾಲಿನಿ, ಪ್ರತಿಭಾವಂತ ವಿದ್ಯಾರ್ಥಿನಿ ದೀಕ್ಷಿತಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

7 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

7 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

11 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

13 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

18 hours ago