ಇಡೀ ದೇಶದಲ್ಲಿ ಕರ್ನಾಟಕ ಹಲವು ವಲಯಗಳಲ್ಲಿ ಮುನ್ನಡೆಯಲ್ಲಿದೆ-ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ನಗರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ನ ಇನ್ಸ್‌ಟಿಟ್ಯೂಷನ್ಸ್ ಸಹಯೋಗದಲ್ಲಿ ಶುಕ್ರವಾರ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ವಿವಿಧ ಶೈಕ್ಷಣಿಕ ಘಟಕಗಳಲ್ಲಿ ಧ್ವಜಾರೋಹಣ ನೆರವೇರಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಅನನ್ಯತೆಯ ಬಗ್ಗೆ ಹೆಮ್ಮೆ ಪಡುವ ಜೊತೆಗೆ ವಾಸ್ತವ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವುದು ಅಗತ್ಯ. ಭ್ರಷ್ಟಾಚಾರವನ್ನು ನಿಗ್ರಹಿಸಿ ಮುನ್ನಡೆದಾಗ ಮಾತ್ರ ರಾಜ್ಯದ ಅಭಿವೃದ್ದಿ ಸಾಧ್ಯ. ಜಾತಿ, ಮತ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸಗಳು ನಡೆಯುತ್ತಿರುವುದು ಆತಂಕಕಾರಿ. ಸಾಮಾಜಿಕ ಶಾಂತಿ ಮತ್ತು ಸಾಮರಸ್ಯವನ್ನು ರೂಢಿಸಿಕೊಳ್ಳದೇ ಹೋದರೆ ರಾಜ್ಯದ ಪ್ರಗತಿ ಸಾಧ್ಯವಿಲ್ಲ. ಇಂದು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆಯೂ ನಾವು ಕಾಳಜಿ ವಹಿಸಿ, ನ್ಯಾಯದ ಹಾದಿಯಲ್ಲಿ ಅವಕಾಶಗಳನ್ನು ಪಡೆಯುವಂತಾಗಬೇಕು ಎಂದರು.

ಜಿಲ್ಲಾ ಲಯನ್ಸ್‌ ಕನ್ನಡ ಮತ್ತು ಸಂಸ್ಕೃತಿ ಸಂಯೋಜಕರಾದ ನಾಗರತ್ನ ಮಾತನಾಡಿ, ಕನ್ನಡ ನಾಡಿಗೆ ಅನನ್ಯ ಇತಿಹಾಸವಿದೆ. ಹರಿದು ಹಂಚಿ ಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಟ್ಟುಗೂಡಿಸಿ ಕರ್ನಾಟಕದ ಏಕೀಕರಣವಾಯಿತು. ಸಮೃದ್ದವಾದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಕನ್ನಡ ಹೊಂದಿದೆ. ಇಡೀ ದೇಶದಲ್ಲಿ ಕರ್ನಾಟಕ ಹಲವು ವಲಯಗಳಲ್ಲಿ ಮುನ್ನಡೆಯಲ್ಲಿದೆ ಎಂದರು.

ದೇವರಾಜ ಅರಸ್‌ ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಅಂ.ರಾ.ವಸತಿ ಶಾಲೆ ಪ್ರಾಂಶುಪಾಲ ಧನಂಜಯ್‌ ಮಾತನಾಡಿದರು. ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆ.ಆರ್.ರಾಕೇಶ್‌, ಜಿಇಟಿ ಜಿಲ್ಲಾ ಸಂಯೋಜಕ ಎಂ.ಆರ್.ಶ್ರೀನಿವಾಸ್, ಪ್ರಾಂಶುಪಾಲರಾದ ಡಾ.ವಿಜಯ ಕಾರ್ತಿಕ್, ನರಸಿಂಹರೆಡ್ಡಿ, ಮಹಂತೇಶಪ್ಪ, ಜಿಯಾವುಲ್ಲಾಖಾನ್, ಲಯನ್ಸ್‌ ಕ್ಲಬ್ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ಎಸ್.ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

*ಕನ್ನಡ ಪುರಸ್ಕಾರ ಪ್ರದಾನ:*

ಇದೇ ವೇಳೆ ಪ್ರೊ.ಕೆ.ಆರ್.ರವಿಕಿರಣ್, ಡಾ.ಎಂ.ಚಿಕ್ಕಣ್ಣ, ರವಿಕುಮಾರ್, ಎಂ.ಬಿ.ರಮೇಶ್, ಕೆ.ಎಲ್.ಸ್ವರ್ಣ, ಎಂ.ಎನ್.ಸತ್ಯನಾರಾಯಣರಾವ್, ಬಿ.ಎಂ.ಸತೀಶ್‌ಕುಮಾರ್, ದೇವರಾಜ್, ಬಿ.ರಜನಿ, ಎಸ್.ಮಂಜುಳಾ, ಟಿ.ಸತ್ಯವತಿ, ಎ.ಕಿರಣ್, ಮಾಲತಿ, ವೆಂಕಟೇಶ್, ಮಾಲಿನಿ, ಪ್ರತಿಭಾವಂತ ವಿದ್ಯಾರ್ಥಿನಿ ದೀಕ್ಷಿತಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

8 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

9 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

9 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

11 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

15 hours ago