ಇನ್ನೂ ಮುಂದೆ ಜಿಲ್ಲಾ‌ಮಟ್ಟದಲ್ಲೇ ಜನರ ಅಹವಾಲು ಸ್ವೀಕಾರ: ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’: ಸೆ.25ಕ್ಕೆ ಜನತಾ ದರ್ಶನಕ್ಕೆ ಸಿಎಂ ಚಾಲನೆ

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

ಇದನ್ನು ತಪ್ಪಿಸಿ ಜನ ಸ್ನೇಹಿ ಸರ್ಕಾರವನ್ನಾಗಿಸಲು ಜನರ ಸಮಸ್ಯೆಗಳ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ‌ ಸೆ.25ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿರುತ್ತಾರೆ.

ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಸೂಚಿಸಿದೆ.

ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಜರೂರಾಗಿ ಸಮನ್ವಯ ಸಾಧಿಸಿಕೊಂಡು ಸದರಿ ದಿನದಂದು ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಸರ್ಕಾರ ಆದೇಶಿಸಲಾಗಿದೆ.

ಜಿಲ್ಲಾಡಳಿತವು ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳ ಇತ್ಯಾದಿಗಳನ್ನು ಜಾಹಿರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳತಕ್ಕದ್ದು.

ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು/ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು.

ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು.

ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ನಡೆಸಬೇಕೆಂದು ಸರ್ಕಾರ ಆದೇಶಿಸಲಾಗಿದೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

7 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

15 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago