ಇನ್ನೂ ಮುಂದೆ ಜಿಲ್ಲಾ‌ಮಟ್ಟದಲ್ಲೇ ಜನರ ಅಹವಾಲು ಸ್ವೀಕಾರ: ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’: ಸೆ.25ಕ್ಕೆ ಜನತಾ ದರ್ಶನಕ್ಕೆ ಸಿಎಂ ಚಾಲನೆ

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

ಇದನ್ನು ತಪ್ಪಿಸಿ ಜನ ಸ್ನೇಹಿ ಸರ್ಕಾರವನ್ನಾಗಿಸಲು ಜನರ ಸಮಸ್ಯೆಗಳ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ‌ ಸೆ.25ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿರುತ್ತಾರೆ.

ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಸೂಚಿಸಿದೆ.

ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಜರೂರಾಗಿ ಸಮನ್ವಯ ಸಾಧಿಸಿಕೊಂಡು ಸದರಿ ದಿನದಂದು ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಸರ್ಕಾರ ಆದೇಶಿಸಲಾಗಿದೆ.

ಜಿಲ್ಲಾಡಳಿತವು ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳ ಇತ್ಯಾದಿಗಳನ್ನು ಜಾಹಿರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳತಕ್ಕದ್ದು.

ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು/ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು.

ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು.

ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ನಡೆಸಬೇಕೆಂದು ಸರ್ಕಾರ ಆದೇಶಿಸಲಾಗಿದೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago