ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.
ಇದನ್ನು ತಪ್ಪಿಸಿ ಜನ ಸ್ನೇಹಿ ಸರ್ಕಾರವನ್ನಾಗಿಸಲು ಜನರ ಸಮಸ್ಯೆಗಳ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.25ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿರುತ್ತಾರೆ.
ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಸೂಚಿಸಿದೆ.
ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಜರೂರಾಗಿ ಸಮನ್ವಯ ಸಾಧಿಸಿಕೊಂಡು ಸದರಿ ದಿನದಂದು ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಸರ್ಕಾರ ಆದೇಶಿಸಲಾಗಿದೆ.
ಜಿಲ್ಲಾಡಳಿತವು ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳ ಇತ್ಯಾದಿಗಳನ್ನು ಜಾಹಿರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳತಕ್ಕದ್ದು.
ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು/ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು.
ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು.
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…