ರಾತ್ರಿ ರಿಸೆಪ್ಷನ್ ಮುಗಿಸಿಕೊಂಡು ಬೆಳಗ್ಗೆ ತಾಳಿ ಕಟ್ಟುವ ವೇಳೆ ಮದುವೆ ಮುರಿದು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಲೆಪುರದ ಕಲ್ಯಾಣ ಮಂಟಪದಲ್ಲಿಂದು ನಡೆದಿದೆ..
ರಾತ್ರಿ ರಿಸೆಪ್ಷನ್ ಮಾಡಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ವೇಳೆ ವಧುವಿನ ಮೇಲೆ ವರ ಅನುಮಾನಗೊಂಡು ತಾಳಿ ಕಟ್ಟದೇ ಮದುವೆ ಮಂಟಪದಿಂದ ಹಾರ ತೆಗೆದು ಬಿಸಾಕಿ ಹೋಗಿದ್ದಾನೆ.
ಯುವತಿ ಮೇಲೆ ಅನುಮಾನವಿದೆ ಎಂದು ಹೇಳಿದ ಯುವಕ ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಈ ಹಿಂದೆ ಹುಡುಗಿ ಬೇರೆಯವನನ್ನ ಲವ್ ಮಾಡಿದ್ದಾಳೆ ಅಂತ ವರನ ಕಿರಿಕ್ ಮಾಡಿದ್ದಾನೆ. ಈ ಯುವತಿ ಮದುವೆಗೂ ಮುಂಚೆಯೆ ಯುವಕನ ಬಳಿ ಎಲ್ಲಾ ವಿಚಾರ ಹೇಳಿದ್ದಳು ಎನ್ನಲಾಗಿದೆ.
ಎಲ್ಲಾ ಆಗಿದ್ದು ಆಗಿದೆ ಎಂದೇಳಿ ಮದುವೆ ಒಪ್ಪಿಕೊಂಡು, ಮದುವೆ ಮಂಟಪಕ್ಕೂ ಬಂದು ನಿನ್ನೆ ರಾತ್ರಿ ನಗು ನಗುತ್ತಾ ಆರತಕ್ಷತೆ ಮಾಡಿಕೊಂಡಿಸಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ಸಮಯಕ್ಕೆ ಮದುವೆ ಬೇಡ ಎಂದು ಹೇಳಿ ಹೈಡ್ರಾಮ ಮಾಡಿ ಮದುವೆ ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ…
ಇದೀಗ ವಧು ಮತ್ತು ವರನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವಧುವಿಗೆ ನ್ಯಾಯ ಕೊಡಿಸಿ ಅಂತ ವಧು ಕುಟುಂಬಸ್ಥರ ಒತ್ತಾಯ ಮಾಡಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…