ರಾತ್ರಿ ರಿಸೆಪ್ಷನ್ ಮುಗಿಸಿಕೊಂಡು ಬೆಳಗ್ಗೆ ತಾಳಿ ಕಟ್ಟುವ ವೇಳೆ ಮದುವೆ ಮುರಿದು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಲೆಪುರದ ಕಲ್ಯಾಣ ಮಂಟಪದಲ್ಲಿಂದು ನಡೆದಿದೆ..
ರಾತ್ರಿ ರಿಸೆಪ್ಷನ್ ಮಾಡಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ವೇಳೆ ವಧುವಿನ ಮೇಲೆ ವರ ಅನುಮಾನಗೊಂಡು ತಾಳಿ ಕಟ್ಟದೇ ಮದುವೆ ಮಂಟಪದಿಂದ ಹಾರ ತೆಗೆದು ಬಿಸಾಕಿ ಹೋಗಿದ್ದಾನೆ.
ಯುವತಿ ಮೇಲೆ ಅನುಮಾನವಿದೆ ಎಂದು ಹೇಳಿದ ಯುವಕ ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಈ ಹಿಂದೆ ಹುಡುಗಿ ಬೇರೆಯವನನ್ನ ಲವ್ ಮಾಡಿದ್ದಾಳೆ ಅಂತ ವರನ ಕಿರಿಕ್ ಮಾಡಿದ್ದಾನೆ. ಈ ಯುವತಿ ಮದುವೆಗೂ ಮುಂಚೆಯೆ ಯುವಕನ ಬಳಿ ಎಲ್ಲಾ ವಿಚಾರ ಹೇಳಿದ್ದಳು ಎನ್ನಲಾಗಿದೆ.
ಎಲ್ಲಾ ಆಗಿದ್ದು ಆಗಿದೆ ಎಂದೇಳಿ ಮದುವೆ ಒಪ್ಪಿಕೊಂಡು, ಮದುವೆ ಮಂಟಪಕ್ಕೂ ಬಂದು ನಿನ್ನೆ ರಾತ್ರಿ ನಗು ನಗುತ್ತಾ ಆರತಕ್ಷತೆ ಮಾಡಿಕೊಂಡಿಸಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ಸಮಯಕ್ಕೆ ಮದುವೆ ಬೇಡ ಎಂದು ಹೇಳಿ ಹೈಡ್ರಾಮ ಮಾಡಿ ಮದುವೆ ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ…
ಇದೀಗ ವಧು ಮತ್ತು ವರನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವಧುವಿಗೆ ನ್ಯಾಯ ಕೊಡಿಸಿ ಅಂತ ವಧು ಕುಟುಂಬಸ್ಥರ ಒತ್ತಾಯ ಮಾಡಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…