ರಾತ್ರಿ ರಿಸೆಪ್ಷನ್ ಮುಗಿಸಿಕೊಂಡು ಬೆಳಗ್ಗೆ ತಾಳಿ ಕಟ್ಟುವ ವೇಳೆ ಮದುವೆ ಮುರಿದು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಲೆಪುರದ ಕಲ್ಯಾಣ ಮಂಟಪದಲ್ಲಿಂದು ನಡೆದಿದೆ..
ರಾತ್ರಿ ರಿಸೆಪ್ಷನ್ ಮಾಡಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ವೇಳೆ ವಧುವಿನ ಮೇಲೆ ವರ ಅನುಮಾನಗೊಂಡು ತಾಳಿ ಕಟ್ಟದೇ ಮದುವೆ ಮಂಟಪದಿಂದ ಹಾರ ತೆಗೆದು ಬಿಸಾಕಿ ಹೋಗಿದ್ದಾನೆ.
ಯುವತಿ ಮೇಲೆ ಅನುಮಾನವಿದೆ ಎಂದು ಹೇಳಿದ ಯುವಕ ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಈ ಹಿಂದೆ ಹುಡುಗಿ ಬೇರೆಯವನನ್ನ ಲವ್ ಮಾಡಿದ್ದಾಳೆ ಅಂತ ವರನ ಕಿರಿಕ್ ಮಾಡಿದ್ದಾನೆ. ಈ ಯುವತಿ ಮದುವೆಗೂ ಮುಂಚೆಯೆ ಯುವಕನ ಬಳಿ ಎಲ್ಲಾ ವಿಚಾರ ಹೇಳಿದ್ದಳು ಎನ್ನಲಾಗಿದೆ.
ಎಲ್ಲಾ ಆಗಿದ್ದು ಆಗಿದೆ ಎಂದೇಳಿ ಮದುವೆ ಒಪ್ಪಿಕೊಂಡು, ಮದುವೆ ಮಂಟಪಕ್ಕೂ ಬಂದು ನಿನ್ನೆ ರಾತ್ರಿ ನಗು ನಗುತ್ತಾ ಆರತಕ್ಷತೆ ಮಾಡಿಕೊಂಡಿಸಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ಸಮಯಕ್ಕೆ ಮದುವೆ ಬೇಡ ಎಂದು ಹೇಳಿ ಹೈಡ್ರಾಮ ಮಾಡಿ ಮದುವೆ ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ…
ಇದೀಗ ವಧು ಮತ್ತು ವರನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವಧುವಿಗೆ ನ್ಯಾಯ ಕೊಡಿಸಿ ಅಂತ ವಧು ಕುಟುಂಬಸ್ಥರ ಒತ್ತಾಯ ಮಾಡಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…