ರಾತ್ರಿ ರಿಸೆಪ್ಷನ್ ಮುಗಿಸಿಕೊಂಡು ಬೆಳಗ್ಗೆ ತಾಳಿ ಕಟ್ಟುವ ವೇಳೆ ಮದುವೆ ಮುರಿದು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಲೆಪುರದ ಕಲ್ಯಾಣ ಮಂಟಪದಲ್ಲಿಂದು ನಡೆದಿದೆ..
ರಾತ್ರಿ ರಿಸೆಪ್ಷನ್ ಮಾಡಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ವೇಳೆ ವಧುವಿನ ಮೇಲೆ ವರ ಅನುಮಾನಗೊಂಡು ತಾಳಿ ಕಟ್ಟದೇ ಮದುವೆ ಮಂಟಪದಿಂದ ಹಾರ ತೆಗೆದು ಬಿಸಾಕಿ ಹೋಗಿದ್ದಾನೆ.
ಯುವತಿ ಮೇಲೆ ಅನುಮಾನವಿದೆ ಎಂದು ಹೇಳಿದ ಯುವಕ ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಈ ಹಿಂದೆ ಹುಡುಗಿ ಬೇರೆಯವನನ್ನ ಲವ್ ಮಾಡಿದ್ದಾಳೆ ಅಂತ ವರನ ಕಿರಿಕ್ ಮಾಡಿದ್ದಾನೆ. ಈ ಯುವತಿ ಮದುವೆಗೂ ಮುಂಚೆಯೆ ಯುವಕನ ಬಳಿ ಎಲ್ಲಾ ವಿಚಾರ ಹೇಳಿದ್ದಳು ಎನ್ನಲಾಗಿದೆ.
ಎಲ್ಲಾ ಆಗಿದ್ದು ಆಗಿದೆ ಎಂದೇಳಿ ಮದುವೆ ಒಪ್ಪಿಕೊಂಡು, ಮದುವೆ ಮಂಟಪಕ್ಕೂ ಬಂದು ನಿನ್ನೆ ರಾತ್ರಿ ನಗು ನಗುತ್ತಾ ಆರತಕ್ಷತೆ ಮಾಡಿಕೊಂಡಿಸಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ಸಮಯಕ್ಕೆ ಮದುವೆ ಬೇಡ ಎಂದು ಹೇಳಿ ಹೈಡ್ರಾಮ ಮಾಡಿ ಮದುವೆ ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ…
ಇದೀಗ ವಧು ಮತ್ತು ವರನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವಧುವಿಗೆ ನ್ಯಾಯ ಕೊಡಿಸಿ ಅಂತ ವಧು ಕುಟುಂಬಸ್ಥರ ಒತ್ತಾಯ ಮಾಡಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…