ಇನ್ನೇನು ತಾಳಿ ಕಟ್ಟೋ ಟೈಮ್ ಗೆ ಮುರಿದು ಬಿದ್ದ ಮದುವೆ: ಕಾರಣವೇನು ಗೊತ್ತಾ…?

ರಾತ್ರಿ ರಿಸೆಪ್ಷನ್ ಮುಗಿಸಿಕೊಂಡು ಬೆಳಗ್ಗೆ ತಾಳಿ ಕಟ್ಟುವ ವೇಳೆ ಮದುವೆ ಮುರಿದು‌ ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಲೆಪುರದ ಕಲ್ಯಾಣ ಮಂಟಪದಲ್ಲಿಂದು ನಡೆದಿದೆ..

ರಾತ್ರಿ ರಿಸೆಪ್ಷನ್ ಮಾಡಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ವೇಳೆ ವಧುವಿನ ಮೇಲೆ ವರ ಅನುಮಾನಗೊಂಡು ತಾಳಿ ಕಟ್ಟದೇ ಮದುವೆ ಮಂಟಪದಿಂದ ಹಾರ ತೆಗೆದು ಬಿಸಾಕಿ ಹೋಗಿದ್ದಾನೆ.

ಯುವತಿ ಮೇಲೆ ಅನುಮಾನವಿದೆ ಎಂದು ಹೇಳಿದ ಯುವಕ ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ್ದಾನೆ ಎನ್ನಲಾಗಿದೆ.

ಈ ಹಿಂದೆ ಹುಡುಗಿ ಬೇರೆಯವನನ್ನ ಲವ್ ಮಾಡಿದ್ದಾಳೆ ಅಂತ ವರನ ಕಿರಿಕ್ ಮಾಡಿದ್ದಾನೆ. ಈ ಯುವತಿ ಮದುವೆಗೂ ಮುಂಚೆಯೆ ಯುವಕನ ಬಳಿ ಎಲ್ಲಾ ವಿಚಾರ  ಹೇಳಿದ್ದಳು ಎನ್ನಲಾಗಿದೆ.

ಎಲ್ಲಾ ಆಗಿದ್ದು ಆಗಿದೆ ಎಂದೇಳಿ ಮದುವೆ ಒಪ್ಪಿಕೊಂಡು, ಮದುವೆ ಮಂಟಪಕ್ಕೂ ಬಂದು ನಿನ್ನೆ ರಾತ್ರಿ ನಗು ನಗುತ್ತಾ ಆರತಕ್ಷತೆ ಮಾಡಿಕೊಂಡಿಸಿಕೊಂಡ ವರ, ಬೆಳಗ್ಗೆ ತಾಳಿ ಕಟ್ಟುವ ಸಮಯಕ್ಕೆ ಮದುವೆ ಬೇಡ ಎಂದು ಹೇಳಿ ಹೈಡ್ರಾಮ ಮಾಡಿ ಮದುವೆ ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ…

ಇದೀಗ ವಧು ಮತ್ತು ವರನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ವಧುವಿಗೆ ನ್ಯಾಯ ಕೊಡಿಸಿ ಅಂತ ವಧು ಕುಟುಂಬಸ್ಥರ ಒತ್ತಾಯ ಮಾಡಿದ್ದಾರೆ.

ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

10 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

19 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

20 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago