Categories: Crime

ಇನ್ನೇನು ಯುಗಾದಿ ಹಬ್ಬದ ವರ್ಷ ತೊಡಕು ಬಂದೇ ಬಿಡ್ತು: ಹಬ್ಬ ಬರುತ್ತಿದ್ದಂತೆ ಹೆಚ್ಚುತ್ತಿರುವ ಹಂದಿ ಕಳ್ಳತನ: ರಾತ್ರೋರಾತ್ರಿ ಮೂರು ಕಡೆ ಸುಮಾರು 120ಕ್ಕೂ ಹೆಚ್ಚು ಹಂದಿ ಕದ್ದೊಯ್ದ ಕಳ್ಳರು: ಹಂದಿ ಕಳ್ಳರ ಹಾವಳಿಗೆ ನಲುಗುತ್ತಿರುವ ಹಂದಿ ಸಾಕಾಣಿಕೆದಾರರು

ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು… ಯುಗಾದಿ ಹಬ್ಬ ಆದ ಮರುದಿನ ಬರೋದೇ ವರ್ಷ ತೊಡಕು. ವರ್ಷ ತೊಡಕು ದಿನ‌ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ. ವರ್ಷ ತೊಡಕು ದಿನದಂದು ಮಾಂಸ ಮಾರಾಟ ಬರಾಟೆ ಮಾರುಕಟ್ಟೆಯಲ್ಲಿ ಬಹಳ ಜೋರಾಗಿರುತ್ತದೆ. ಈ ಹಿನ್ನೆಲೆ ವರ್ಷ ತೊಡಕು ಇನ್ನೊಂದು ವಾರ ಇರುವಾಗಲೇ ಶೆಡ್ ನಲ್ಲಿರುವ ಹಂದಿಗಳು ರಾತ್ರೋರಾತ್ರಿ‌ ಕಳ್ಳರ ಕೈಚಳಕದಿಂದ ಮಂಗಮಾಯವಾಗುತ್ತಿವೆ. ಎಲ್ಲೆಲ್ಲಿ, ಎಷ್ಟೆಎಷ್ಟು ಹಂದಿಗಳು ಕಳ್ಳತನವಾಗಿವೆ ಎಂಬುದರ ಕುರಿತು ಕಂಪ್ಲೀಟ್ ಮಾಹಿತಿ‌‌ ಇಲ್ಲಿದೆ ಓದಿ….

ದೊಡ್ಡಬಳ್ಳಾಪುರ, ರಾಜಾನುಕುಂಟೆ, ದೇವನಹಳ್ಳಿಯಲ್ಲಿ‌ ಹಂದಿ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾಮಾನ್ಯವಾಗಿ ಹಂದಿ‌ ಶೆಡ್ ಗಳು ಊರ ಹೊರವಲಯದಲ್ಲಿ ಇರುತ್ತವೆ. ಮಾಲೀಕರು ಹಂದಿ ಶೆಡ್ ಬಳಿ ಇಲ್ಲದೇರುವಾಗ ಹೊಂಚಾಕಿ ರಾತ್ರೋರಾತ್ರಿ‌‌ ಬರುವ ಕಳ್ಳರು, ಸಿಸಿಟಿವಿ ಇದ್ದರೂ ರಾಜಾರೋಷವಾಗಿ ಶೆಡ್ ಗೆ ನುಗ್ಗಿ ಸಿಕ್ಕಸಿಕ್ಕ ಹಂದಿಗಳನ್ನು ಗೂಡ್ಸ್ ವಾಹನಕ್ಕೆ‌‌ ತುಂಬಿಕೊಂಡು ಪರಾರಿಯಾಗುತ್ತಾರೆ….

ಮಾಲೀಕರು ಬೆಳಗ್ಗೆ ಶೆಡ್ ಬಳಿ ಬಂದು ನೋಡಿದಾಗ ಹಂದಿಗಳು ನಾಪತ್ತೆಯಾಗಿರುವುದು ಕಂಡುಬರುತ್ತದೆ. ಹೀಗೆ ಕಳೆದ ಒಂದು ವಾರದಲ್ಲಿ ಮೂರು ಕಡೆ ಸುಮಾರು 120ಕ್ಕೂ‌ ಹೆಚ್ಚು ಹಂದಿಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ.

ಎಲ್ಲೆಲ್ಲಿ, ಎಷ್ಟೆಎಷ್ಟು ಹಂದಿ‌ ಕಳವು….

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಮಾ.23ರ ಶನಿವಾರ ರಾತ್ರಿ ಹಂದಿ ಶೆಡ್ ಗೆ ನುಗ್ಗಿದ ಕಳ್ಳರು ಸುಮಾರು 34 ಹಂದಿ ಮರಿಗಳ ಕಳ್ಳತನ ಮಾಡಿದಲ್ಲದೇ, ಸೋಮವಾರ ರಾತ್ರಿ ಕೂಡ ಅದೇ ಹಂದಿ ಶೆಡ್ ಗೆ ನುಗ್ಗಿ 17 ತಾಯಿ ಹಂದಿಗಳ ಕಳವು ಮಾಡಿದ್ದಾರೆ ಎಂದು ಹಂದಿ ಶೆಡ್ ಮಾಲೀಕರು ತಿಳಿಸಿದ್ದಾರೆ.

ರಾಜಾನುಕುಂಟೆ

ಅದೇರೀತಿ‌ ಯಲಹಂಕದ ಹೆಸರಘಟ್ಟ ಹೋಬಳಿಯ ರಾಜಾನುಕುಂಟೆ ಸಮೀಪದ ಸೀತ ಕೆಂಪನಹಳ್ಳಿ ಬಳಿ ಮಾ.22 ರಾತ್ರಿ ಹಂದಿ ಶೆಡ್ ಕಾವಲುಗಾರನಿಗೆ ಹೆದರಿಸಿ ಮೊಬೈಲ್ ಕಸಿದು ಸುಮಾರು 20 ಹಂದಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ.

ದೇವನಹಳ್ಳಿ

ಇದರ ಜೊತೆಗೆ ವಿಶ್ವನಾಥಪುರ‌ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಮಂಗಲ ಗ್ರಾಮದ ಲೋಕೇಶ್ ಎಂಬುವರ ಶೆಡ್ ನಲ್ಲಿ ಮಾ.21ರಂದು ರಾಜಾರೋಷವಾಗಿ 50 ಹಂದಿಗಳನ್ನು ಕಳ್ಳತನ ಮಾಡಿದ್ದಾರೆ.‌ ಶೆಡ್ ಗೆ ಎಂಟ್ರಿ ಆದ 6 ಜನರ ತಂಡ, ಓರ್ವ ಕಾವಲು ಕಾಯುತ್ತಿದ್ದರೆ, ಮತ್ತೆ ನಾಲ್ಕು ಜನ ಹಂದಿಗಳನ್ನು ಶೆಡ್ ನಿಂದ ಹೊತ್ತುಕೊಂಡು ಬಂದು ಲೋಡ್ ಮಾಡುತ್ತಿದ್ದರು. ಮತ್ತೊಬ್ಬ ವಾಹನ ಮೇಲೆ ನಿಂತು ತುಂಬಿಕೊಳ್ಳುತ್ತಿದ್ದ.‌ ಈ ಎಲ್ಲಾ ದೃಶ್ಯಗಳು ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಹೀಗೆ ಕಳೆದ ಒಂದು ವಾರದಲ್ಲಿ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸುಮಾರು 120ಕ್ಕೂ‌ ಹೆಚ್ಚು ಹಂದಿಗಳನ್ನು ಕಳ್ಳರು ಕದ್ದೊಯ್ದಿರುವ ಪ್ರಕರಣ ನಡೆದಿದೆ.

ವರ್ಷವಿಡೀ ಕಣ್ಣಲ್ಲಿ ಕಣ್ಣಿಟ್ಟು ಸಾಕಿದ್ದ ಪ್ರಾಣಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ ಮಾಡುತ್ತಿರುವ‌ ಕಳ್ಳರ ಗ್ಯಾಂಗ್. ಹಬ್ಬಕ್ಕೆ ಮಾರಾಟ ಮಾಡಲು ಮಾಲೀಕರು ಸಿದ್ಧತೆ ಮಾಡಿಕೊಂಡಿದ್ದರು. ವರ್ಷವೆಲ್ಲಾ  ಸಾಕಿ ಇನ್ನೇನು ಹಬ್ಬಕ್ಕೆ‌‌ ಮೂರ್ಕಾಸು‌‌ ಲಾಭವನ್ನು‌ ನೋಡುತ್ತೇವೆ ಎಂದುಕೊಂಡಿದ್ದ ರೈತರಿಗೆ ಕಳ್ಳರ ಹಾವಳಿಯಿಂದ ಈಗ ಶಾಕ್‌ ಹೊಡೆದಂತೆ ಆಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿದ ರೈತರು ಪೊಲೀಸ್ ಠಾಣೆಗಳಿಗೆ ಅಲೆಯುತ್ತಿದ್ದಾರೆ‌.

ಒಟ್ಟಾರೆ, ಸಾಕು ಪ್ರಾಣಿಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಹಂದಿಯ ಜೊತೆಗೆ ಕುರಿ, ಮೇಕೆ ಕಳ್ಳತನ ಪ್ರಕರಣಗಳೂ ಕೂಡ ಹೆಚ್ಚಾಗುತ್ತಿವೆ‌. ರೈತರು ರಾತ್ರಿಯಿಡೀ ಸಾಕು ಪ್ರಾಣಿಗಳನ್ನು ಕಾಯಬೇಕಾದ ಸ್ಥಿತಿ ಎದುರಾಗಿದೆ. ಕಳವು ಪ್ರಕರಣಕ್ಕೆ ಪೊಲೀಸರು ಬ್ರೇಕ್ ಹಾಕದೆ ಇದ್ದಲ್ಲಿ ಯುವಕರ ಸ್ವಾವಲಂಬಿ ಬದುಕಿಗೆ ಕೊಳ್ಳಿ ಇಟ್ಟಾಂತಾಗುತ್ತದೆ. ಇನ್ನಾದರೂ ಪೊಲೀಸ್ ಇಲಾಖೆ ಎಚ್ಚೆತ್ತು ಖದೀಮರನ್ನು ಪತ್ತೆಹಚ್ಚಿ ಹೆಡೆಮುರಿ ಕಟ್ಟುತ್ತಾ ಕಾದು ನೋಡಬೇಕಿದೆ….

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

9 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

21 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

22 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago