83% ರಷ್ಟು ಮನಷ್ಯ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾನೆ. ಇದರಿಂದ ವಿಧವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ.. ಮನಸ್ಸು, ದೇಹವನ್ನು ಹತೋಟಿಯಲ್ಲಿಟ್ಟುಕೊಂಡರೆ ಉತ್ತಮ. ಆದ್ದರಿಂದ ಊಟವನ್ನು ಸಮಯಕ್ಕೆ ಸರಿಯಾಗಿ ಮಾಡಬೇಕು. ಸಮಾಧಾನವಾಗಿ ನೀರನ್ನು ಕುಡಿಯಬೇಕು. ನೆಮ್ಮದಿಯಾಗಿ ನಿದ್ರೆ ಮಾಡಬೇಕು. ಇನ್ನೊಬ್ಬರ ಅಭಿಪ್ರಾಯ ಪಡೆದು ಬದುಕುವುದನ್ನು ಬಿಡಬೇಕು ಎಂದು ಖ್ಯಾತ ಮನಃಶಾಸ್ತ್ರಜ್ಞೆ ಮತ್ತು ಪ್ರೇರಕ ಭಾಷಣಗಾರ್ತಿ ಡಾ.ಪದ್ಮಾಕ್ಷಿ ಲೋಕೇಶ್ ಹೇಳಿದರು..
ತಾಲ್ಲೂಕು ವಕೀಲರ ಸಂಘದಿಂದ ನಗರದ ಕೋರ್ಟ್ ಆವರಣದಲ್ಲಿಂದು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತ್ತು… ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಒತ್ತಡ ಇರುತ್ತದೆ. ಇದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು…
4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿರ್ಮಲಾ. ಕೆ ಅವರು ಮಾತನಾಡಿ, ಸಮಾಜದಲ್ಲಿ ಸಮಾನತೆ ಅತಿ ಮುಖ್ಯ. ಸಮಾಜಮುಖಿಯಾಗಿ ಎಲ್ಲರು ಕೆಲಸ ಮಾಡಬೇಕು. ಮಹಿಳೆಗೆ ಎಲ್ಲಕ್ಕಿಂತ ಮಿಗಿಲಾಗಿ ಆತ್ಮಗೌರವವಿರಬೇಕು.. ಸಮಾಜದಲ್ಲಿ ಮಹಿಳೆಯರನ್ನು ಸಮಾನವಾಗಿ ಕಾಣಬೇಕು. ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಹೇಳಿದರು..
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಎ. ಶಿಲ್ಪಾ ಅವರು ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಾಗಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ನ್ಯಾಯಾಂಗದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗಬೇಕು ಎಂದರು.
ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಪ್ರೀತಿ. ಕೆ ಅವರು ಮಾತನಾಡಿ, ಮಹಿಳೆ ನಾಲ್ಕು ಗೋಡೆಗೆ ಮಾತ್ರ ಸೀಮಿತವಾಗಿರದೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಇತರೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಛಾಪನ್ನು ಮೂಡಿಸುತ್ತಿದ್ದಾರೆ. ಮಹಿಳೆಯರ ಸಾಧನೆಯನ್ನು ಗುರುತಿಸಿ ಗೌರವಿಸಲು ಹಾಗೂ ಇತರರಿಗೆ ಮಾದರಿಯಾಗಲು ಈ ಮಹಿಳಾ ದಿನಾಚರಣೆ ತುಂಬಾ ಸಹಕಾರಿಯಾಗಿದೆ ಎಂದು ಹೇಳಿದರು…
ಈ ವೇಳೆ 1ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್. ಆರ್.ಜೆ.ಎಸ್, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ ಸೇರಿದಂತೆ ಸಂಘದ ಪದಾಧಿಕಾರಿಗಳು, ವಕೀಲರು ಸೇರಿದಂತೆ ಇತರರು ಉಪಸ್ಥಿತರಿದ್ದರು…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…