ಇನ್ನೊಬ್ಬರ ಅಭಿಪ್ರಾಯ ಪಡೆದು ಬದುಕುವುದನ್ನು ಬಿಡಬೇಕು- ಖ್ಯಾತ ಮನಃಶಾಸ್ತ್ರಜ್ಞೆ ಮತ್ತು ಪ್ರೇರಕ ಭಾಷಣಗಾರ್ತಿ ಡಾ.ಪದ್ಮಾಕ್ಷಿ ಲೋಕೇಶ್

83% ರಷ್ಟು ಮನಷ್ಯ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾನೆ. ಇದರಿಂದ ವಿಧವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ.. ಮನಸ್ಸು, ದೇಹವನ್ನು ಹತೋಟಿಯಲ್ಲಿಟ್ಟುಕೊಂಡರೆ ಉತ್ತಮ. ಆದ್ದರಿಂದ ಊಟವನ್ನು ಸಮಯಕ್ಕೆ ಸರಿಯಾಗಿ ಮಾಡಬೇಕು. ಸಮಾಧಾನವಾಗಿ ನೀರನ್ನು ಕುಡಿಯಬೇಕು. ನೆಮ್ಮದಿಯಾಗಿ ನಿದ್ರೆ ಮಾಡಬೇಕು. ಇನ್ನೊಬ್ಬರ ಅಭಿಪ್ರಾಯ ಪಡೆದು ಬದುಕುವುದನ್ನು ಬಿಡಬೇಕು ಎಂದು ಖ್ಯಾತ ಮನಃಶಾಸ್ತ್ರಜ್ಞೆ ಮತ್ತು ಪ್ರೇರಕ ಭಾಷಣಗಾರ್ತಿ ಡಾ.ಪದ್ಮಾಕ್ಷಿ ಲೋಕೇಶ್ ಹೇಳಿದರು..

ತಾಲ್ಲೂಕು ವಕೀಲರ ಸಂಘದಿಂದ ನಗರದ ಕೋರ್ಟ್ ಆವರಣದಲ್ಲಿಂದು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತ್ತು… ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಒತ್ತಡ ಇರುತ್ತದೆ. ಇದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು…

4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿರ್ಮಲಾ. ಕೆ ಅವರು ಮಾತನಾಡಿ, ಸಮಾಜದಲ್ಲಿ ಸಮಾನತೆ ಅತಿ ಮುಖ್ಯ. ಸಮಾಜಮುಖಿಯಾಗಿ ಎಲ್ಲರು ಕೆಲಸ ಮಾಡಬೇಕು. ಮಹಿಳೆಗೆ ಎಲ್ಲಕ್ಕಿಂತ ಮಿಗಿಲಾಗಿ ಆತ್ಮಗೌರವವಿರಬೇಕು.. ಸಮಾಜದಲ್ಲಿ ಮಹಿಳೆಯರನ್ನು ಸಮಾನವಾಗಿ ಕಾಣಬೇಕು. ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಹೇಳಿದರು..

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಎ. ಶಿಲ್ಪಾ ಅವರು ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಾಗಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ನ್ಯಾಯಾಂಗದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗಬೇಕು ಎಂದರು.

ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಪ್ರೀತಿ. ಕೆ ಅವರು ಮಾತನಾಡಿ, ಮಹಿಳೆ ನಾಲ್ಕು ಗೋಡೆಗೆ ಮಾತ್ರ ಸೀಮಿತವಾಗಿರದೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಇತರೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಛಾಪನ್ನು ಮೂಡಿಸುತ್ತಿದ್ದಾರೆ. ಮಹಿಳೆಯರ ಸಾಧನೆಯನ್ನು ಗುರುತಿಸಿ ಗೌರವಿಸಲು ಹಾಗೂ ಇತರರಿಗೆ ಮಾದರಿಯಾಗಲು ಈ ಮಹಿಳಾ ದಿನಾಚರಣೆ ತುಂಬಾ ಸಹಕಾರಿಯಾಗಿದೆ ಎಂದು ಹೇಳಿದರು…

ಈ ವೇಳೆ 1ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್. ಆರ್.ಜೆ.ಎಸ್, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ ಸೇರಿದಂತೆ ಸಂಘದ ಪದಾಧಿಕಾರಿಗಳು, ವಕೀಲರು ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

9 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

15 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

22 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

22 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago