Categories: ಆರೋಗ್ಯ

“ಇನ್ಮೇಲೆ ನಿಮ್ಮ ಕಿಡ್ನಿ ಸೇಫ್” – ಇದು ಮೆಡಿಕವರ್ ಆಸ್ಪತ್ರೆ ಪ್ಲ್ಯಾನ್

ಕಿಡ್ನಿ ನಮ್ಮ ದೇಹದ ಬಹು ಮುಖ್ಯ ಅಂಗ. ಪ್ರತಿ ಕ್ಷಣ ನಾವು ಕಿಡ್ನಿ ಆರೋಗ್ಯದ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ. ಹೀಗಿರುವಾಗ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಮೆಡಿಕವರ್ ಆಸ್ಪತ್ರೆ ಕಿಡ್ನಿ ತಪಾಸಣೆಗಾಗಿ ವಿಶೇಷ ಪ್ಯಾಕೇಜ್ ಆರಂಭಿಸಿದೆ. ಮುಂಚಿತವಾಗಿ ಕಿಡ್ನಿಗೆ ಸಂಬಂಧಿಸಿದ ತಪಾಸಣೆ ನಡೆಸಲು ಮತ್ತು ಯಾವುದೇ ಸಮಸ್ಯೆ ಆಗದಂತೆ ತಡೆಯಲು ಈ ಪ್ಯಾಕೇಜ್ ಸಹಾಯವಾಗಲಿದೆ.

ಈ ವಿಶೇಷ ಆರೋಗ್ಯ ಯೋಜನೆ 10ನೇ ಫೆಬ್ರವರಿ ರಿಂದ 28ನೇ ಫೆಬ್ರವರಿ ರವರೆಗೆ, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ (ಭಾನುವಾರಗಳು ಮತ್ತು ಸಾರ್ವಜನಿಕ ರಜಾದಿನಗಳು ಹೊರತುಪಡಿಸಿ) ಲಭ್ಯವಿರುತ್ತದೆ.
ಕಿಡ್ನಿ ಆರೋಗ್ಯ ನಮ್ಮ ದೇಹದ ಸಂಪೂರ್ಣ ಸುರಕ್ಷತೆಯ ಸಂಕೇತವಾಗಿದೆ. ಕಿಡ್ನಿ ಸಮಸ್ಯೆಯನ್ನು ಮುಂಚಿತ ಪತ್ತೆ ಮಾಡುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಈ ತಪಾಸಣೆ ಪ್ಯಾಕೇಜ್ ಕಡಿಮೆ ದರದಲ್ಲಿ ಸಮಗ್ರ ತಪಾಸಣೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಇದರಿಂದ ಅಪಾಯದಲ್ಲಿರುವ ವ್ಯಕ್ತಿಗಳು ಸಕಾಲದಲ್ಲಿ ವೈದ್ಯಕೀಯ ಸಲಹೆ ಪಡೆಯಬಹುದು.

ಪ್ಯಾಕೇಜ್ ವಿವರಗಳು:
ಈ ತಪಾಸಣೆ ಪ್ಯಾಕೇಜ್ ಒಳಗೊಂಡಿದೆ:
-ಸಂಪೂರ್ಣ ಮೂತ್ರ ಪರೀಕ್ಷೆ
-ಸೀರಮ್ ಕ್ರಿಯಾಟಿನಿನ್ ಪರೀಕ್ಷೆ
-ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ (KUB)
-ನಫ್ರೋಲಾಜಿಸ್ಟ್ ಸಮಾಲೋಚನೆ
-ಆಹಾರ ತಜ್ಞರ ಸಮಾಲೋಚನೆ
ಈ ಪ್ಯಾಕೇಜ್‌ನ ಪ್ರಾರಂಭಿಕ ದರ 4140ರೂ ಆಗಿದ್ದು, ಇದನ್ನು ಈಗ ವಿಶೇಷ ರಿಯಾಯಿತಿ ದರದಲ್ಲಿ ₹1000 ಗೆ ನೀಡಲಾಗುತ್ತಾ ಇದೆ .

*ಯಾರು ತಪಾಸಣೆ ಮಾಡಿಸಿಕೊಳ್ಳಬೇಕು?*
ಕೆಳಕಂಡ ಲಕ್ಷಣಗಳು ಅಥವಾ ಸ್ಥಿತಿಯುಳ್ಳವರು ಈ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಉತ್ತಮ.

ಮಧುಮೇಹ, ರಕ್ತದೊತ್ತಡ ಪೆಲ್ವಿಕ್ ನೋವು ಹಾಗೂ ಮೂತ್ರದಲ್ಲಿ ರಕ್ತ ಅಸಹಜ ಬಣ್ಣದ ಮೂತ್ರ ವಿಸರ್ಜನೆ ಉರಿಯುವುದು.‌ಈ ಎಲ್ಲಾ ರೋಗ ಲಕ್ಷಣಗಳು ಇರುವವರು ಬಂದು ಪರೀಕ್ಷೆ ಮಾಡಿಕೊಳ್ಳ ಬಹುದು.

ಹಿರಿಯ ತಜ್ಞ ನಫ್ರೋಲಾಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟೇಷನ್ ವೈದ್ಯರಾದ ಡಾ. ರವಿ ಶಂಕರ್ ರವರನ್ನಜ ಭೇಟಿಯಾಗಿ ಸಲಹೆ ಪಡೆಯಬಹುದಾಗಿದೆ .
ಸಂದರ್ಶನಕ್ಕೆ ಅಥವಾ ಹೆಚ್ಚಿನ ಮಾಹಿತಿಗಾಗಿ 040 68334455 ಅನ್ನು ಸಂಪರ್ಕಿಸಿ…

Ramesh Babu

Journalist

Share
Published by
Ramesh Babu

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

5 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

5 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

7 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

19 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

20 hours ago