Categories: ಆರೋಗ್ಯ

“ಇನ್ಮೇಲೆ ನಿಮ್ಮ ಕಿಡ್ನಿ ಸೇಫ್” – ಇದು ಮೆಡಿಕವರ್ ಆಸ್ಪತ್ರೆ ಪ್ಲ್ಯಾನ್

ಕಿಡ್ನಿ ನಮ್ಮ ದೇಹದ ಬಹು ಮುಖ್ಯ ಅಂಗ. ಪ್ರತಿ ಕ್ಷಣ ನಾವು ಕಿಡ್ನಿ ಆರೋಗ್ಯದ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ. ಹೀಗಿರುವಾಗ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಮೆಡಿಕವರ್ ಆಸ್ಪತ್ರೆ ಕಿಡ್ನಿ ತಪಾಸಣೆಗಾಗಿ ವಿಶೇಷ ಪ್ಯಾಕೇಜ್ ಆರಂಭಿಸಿದೆ. ಮುಂಚಿತವಾಗಿ ಕಿಡ್ನಿಗೆ ಸಂಬಂಧಿಸಿದ ತಪಾಸಣೆ ನಡೆಸಲು ಮತ್ತು ಯಾವುದೇ ಸಮಸ್ಯೆ ಆಗದಂತೆ ತಡೆಯಲು ಈ ಪ್ಯಾಕೇಜ್ ಸಹಾಯವಾಗಲಿದೆ.

ಈ ವಿಶೇಷ ಆರೋಗ್ಯ ಯೋಜನೆ 10ನೇ ಫೆಬ್ರವರಿ ರಿಂದ 28ನೇ ಫೆಬ್ರವರಿ ರವರೆಗೆ, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ (ಭಾನುವಾರಗಳು ಮತ್ತು ಸಾರ್ವಜನಿಕ ರಜಾದಿನಗಳು ಹೊರತುಪಡಿಸಿ) ಲಭ್ಯವಿರುತ್ತದೆ.
ಕಿಡ್ನಿ ಆರೋಗ್ಯ ನಮ್ಮ ದೇಹದ ಸಂಪೂರ್ಣ ಸುರಕ್ಷತೆಯ ಸಂಕೇತವಾಗಿದೆ. ಕಿಡ್ನಿ ಸಮಸ್ಯೆಯನ್ನು ಮುಂಚಿತ ಪತ್ತೆ ಮಾಡುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಈ ತಪಾಸಣೆ ಪ್ಯಾಕೇಜ್ ಕಡಿಮೆ ದರದಲ್ಲಿ ಸಮಗ್ರ ತಪಾಸಣೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಇದರಿಂದ ಅಪಾಯದಲ್ಲಿರುವ ವ್ಯಕ್ತಿಗಳು ಸಕಾಲದಲ್ಲಿ ವೈದ್ಯಕೀಯ ಸಲಹೆ ಪಡೆಯಬಹುದು.

ಪ್ಯಾಕೇಜ್ ವಿವರಗಳು:
ಈ ತಪಾಸಣೆ ಪ್ಯಾಕೇಜ್ ಒಳಗೊಂಡಿದೆ:
-ಸಂಪೂರ್ಣ ಮೂತ್ರ ಪರೀಕ್ಷೆ
-ಸೀರಮ್ ಕ್ರಿಯಾಟಿನಿನ್ ಪರೀಕ್ಷೆ
-ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ (KUB)
-ನಫ್ರೋಲಾಜಿಸ್ಟ್ ಸಮಾಲೋಚನೆ
-ಆಹಾರ ತಜ್ಞರ ಸಮಾಲೋಚನೆ
ಈ ಪ್ಯಾಕೇಜ್‌ನ ಪ್ರಾರಂಭಿಕ ದರ 4140ರೂ ಆಗಿದ್ದು, ಇದನ್ನು ಈಗ ವಿಶೇಷ ರಿಯಾಯಿತಿ ದರದಲ್ಲಿ ₹1000 ಗೆ ನೀಡಲಾಗುತ್ತಾ ಇದೆ .

*ಯಾರು ತಪಾಸಣೆ ಮಾಡಿಸಿಕೊಳ್ಳಬೇಕು?*
ಕೆಳಕಂಡ ಲಕ್ಷಣಗಳು ಅಥವಾ ಸ್ಥಿತಿಯುಳ್ಳವರು ಈ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಉತ್ತಮ.

ಮಧುಮೇಹ, ರಕ್ತದೊತ್ತಡ ಪೆಲ್ವಿಕ್ ನೋವು ಹಾಗೂ ಮೂತ್ರದಲ್ಲಿ ರಕ್ತ ಅಸಹಜ ಬಣ್ಣದ ಮೂತ್ರ ವಿಸರ್ಜನೆ ಉರಿಯುವುದು.‌ಈ ಎಲ್ಲಾ ರೋಗ ಲಕ್ಷಣಗಳು ಇರುವವರು ಬಂದು ಪರೀಕ್ಷೆ ಮಾಡಿಕೊಳ್ಳ ಬಹುದು.

ಹಿರಿಯ ತಜ್ಞ ನಫ್ರೋಲಾಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟೇಷನ್ ವೈದ್ಯರಾದ ಡಾ. ರವಿ ಶಂಕರ್ ರವರನ್ನಜ ಭೇಟಿಯಾಗಿ ಸಲಹೆ ಪಡೆಯಬಹುದಾಗಿದೆ .
ಸಂದರ್ಶನಕ್ಕೆ ಅಥವಾ ಹೆಚ್ಚಿನ ಮಾಹಿತಿಗಾಗಿ 040 68334455 ಅನ್ನು ಸಂಪರ್ಕಿಸಿ…

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago