ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇನ್ನೂ ಚೇತನ್ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ನಿವಾಸಿ, ಅಭಿಷೇಕ್ ಮೂಲತಃ ಮಂಡ್ಯ ಜಿಲ್ಲೆಯವ. ಇಬ್ಬರೂ ಒಂದೇ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದರಿಂದ ಸ್ನೇಹಿತರಾಗಿದ್ದಾರೆ. ಇಬ್ಬರಿಗೂ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ ಇತ್ತಂತೆ. ಆದ್ರೆ ಕೈಯಲ್ಲಿ ದುಡ್ಡಿಲ್ಲ, ಇದಕ್ಕಾಗಿ ಇಬ್ಬರು ಪ್ಲ್ಯಾನ್‌ ಮಾಡಿ ಚಿಕ್ಕಬಳ್ಳಾಪುರ ನಗರದ ಚೇತನ್ ಮನೆ ಪಕ್ಕದಲ್ಲೇ ಇರುವ ಮನೆಗಳಿಗೆ ಕನ್ನ ಹಾಕಿದ್ದರು.

ಚಾಮರಾಜಪೇಟೆಯ ಶಿಕ್ಷಕಿ ವಿನುತಾ ಹಾಗೂ ಶಾಂತಮ್ಮ ಎಂಬುವವರ ಮನೆಗಳಿಗೆ ನುಗ್ಗಿ ಚಿನ್ನಾಭರಣ ಸೇರಿ ಲಕ್ಷಾಂತರ ರೂಪಾಯಿ ನಗದು ದೋಚಿ ಇಬ್ಬರು ಮೋಜು ಮಸ್ತಿ ಮಾಡಿದ್ರು. ಆದರೆ ಈಗ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಅಂದಹಾಗೆ ಚೇತನ್ ಹಾಗೂ ಅಭಿಷೇಕ್ ಮೊದಲು ವಿನುತಾ ಅವರ ಮನೆಗೆ ನುಗ್ಗಿ ಮನೆಯ ಬಿರುವಿನಿಲ್ಲಿದ್ದ ಸರಿಸುಮಾರು 6 ಲಕ್ಷ 25 ಸಾವಿರ ಮೌಲ್ಯದ ಚಿನ್ನಾಭರಣಗಳನ್ನ ದೋಚಿದ್ರು. ತದನಂತರ ಇದೇ ಚಾಮರಾಜಪೇಟೆಯಲ್ಲಿ ಶಾಂತಮ್ಮ ಎಂಬುವವರ ಮನೆಗೆ ನುಗ್ಗಿ ಅವರ ಮನೆಯಲ್ಲೂ 85 ಸಾವಿರ ನಗದು, ಚಿನ್ನಾಭರಣಗಳನ್ನ ದೋಚಿದ್ರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 hour ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

15 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

16 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

18 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago