ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇನ್ನೂ ಚೇತನ್ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ನಿವಾಸಿ, ಅಭಿಷೇಕ್ ಮೂಲತಃ ಮಂಡ್ಯ ಜಿಲ್ಲೆಯವ. ಇಬ್ಬರೂ ಒಂದೇ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದರಿಂದ ಸ್ನೇಹಿತರಾಗಿದ್ದಾರೆ. ಇಬ್ಬರಿಗೂ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ ಇತ್ತಂತೆ. ಆದ್ರೆ ಕೈಯಲ್ಲಿ ದುಡ್ಡಿಲ್ಲ, ಇದಕ್ಕಾಗಿ ಇಬ್ಬರು ಪ್ಲ್ಯಾನ್ ಮಾಡಿ ಚಿಕ್ಕಬಳ್ಳಾಪುರ ನಗರದ ಚೇತನ್ ಮನೆ ಪಕ್ಕದಲ್ಲೇ ಇರುವ ಮನೆಗಳಿಗೆ ಕನ್ನ ಹಾಕಿದ್ದರು.
ಚಾಮರಾಜಪೇಟೆಯ ಶಿಕ್ಷಕಿ ವಿನುತಾ ಹಾಗೂ ಶಾಂತಮ್ಮ ಎಂಬುವವರ ಮನೆಗಳಿಗೆ ನುಗ್ಗಿ ಚಿನ್ನಾಭರಣ ಸೇರಿ ಲಕ್ಷಾಂತರ ರೂಪಾಯಿ ನಗದು ದೋಚಿ ಇಬ್ಬರು ಮೋಜು ಮಸ್ತಿ ಮಾಡಿದ್ರು. ಆದರೆ ಈಗ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಅಂದಹಾಗೆ ಚೇತನ್ ಹಾಗೂ ಅಭಿಷೇಕ್ ಮೊದಲು ವಿನುತಾ ಅವರ ಮನೆಗೆ ನುಗ್ಗಿ ಮನೆಯ ಬಿರುವಿನಿಲ್ಲಿದ್ದ ಸರಿಸುಮಾರು 6 ಲಕ್ಷ 25 ಸಾವಿರ ಮೌಲ್ಯದ ಚಿನ್ನಾಭರಣಗಳನ್ನ ದೋಚಿದ್ರು. ತದನಂತರ ಇದೇ ಚಾಮರಾಜಪೇಟೆಯಲ್ಲಿ ಶಾಂತಮ್ಮ ಎಂಬುವವರ ಮನೆಗೆ ನುಗ್ಗಿ ಅವರ ಮನೆಯಲ್ಲೂ 85 ಸಾವಿರ ನಗದು, ಚಿನ್ನಾಭರಣಗಳನ್ನ ದೋಚಿದ್ರು.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…