ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇನ್ನೂ ಚೇತನ್ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ನಿವಾಸಿ, ಅಭಿಷೇಕ್ ಮೂಲತಃ ಮಂಡ್ಯ ಜಿಲ್ಲೆಯವ. ಇಬ್ಬರೂ ಒಂದೇ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದರಿಂದ ಸ್ನೇಹಿತರಾಗಿದ್ದಾರೆ. ಇಬ್ಬರಿಗೂ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ ಇತ್ತಂತೆ. ಆದ್ರೆ ಕೈಯಲ್ಲಿ ದುಡ್ಡಿಲ್ಲ, ಇದಕ್ಕಾಗಿ ಇಬ್ಬರು ಪ್ಲ್ಯಾನ್‌ ಮಾಡಿ ಚಿಕ್ಕಬಳ್ಳಾಪುರ ನಗರದ ಚೇತನ್ ಮನೆ ಪಕ್ಕದಲ್ಲೇ ಇರುವ ಮನೆಗಳಿಗೆ ಕನ್ನ ಹಾಕಿದ್ದರು.

ಚಾಮರಾಜಪೇಟೆಯ ಶಿಕ್ಷಕಿ ವಿನುತಾ ಹಾಗೂ ಶಾಂತಮ್ಮ ಎಂಬುವವರ ಮನೆಗಳಿಗೆ ನುಗ್ಗಿ ಚಿನ್ನಾಭರಣ ಸೇರಿ ಲಕ್ಷಾಂತರ ರೂಪಾಯಿ ನಗದು ದೋಚಿ ಇಬ್ಬರು ಮೋಜು ಮಸ್ತಿ ಮಾಡಿದ್ರು. ಆದರೆ ಈಗ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಅಂದಹಾಗೆ ಚೇತನ್ ಹಾಗೂ ಅಭಿಷೇಕ್ ಮೊದಲು ವಿನುತಾ ಅವರ ಮನೆಗೆ ನುಗ್ಗಿ ಮನೆಯ ಬಿರುವಿನಿಲ್ಲಿದ್ದ ಸರಿಸುಮಾರು 6 ಲಕ್ಷ 25 ಸಾವಿರ ಮೌಲ್ಯದ ಚಿನ್ನಾಭರಣಗಳನ್ನ ದೋಚಿದ್ರು. ತದನಂತರ ಇದೇ ಚಾಮರಾಜಪೇಟೆಯಲ್ಲಿ ಶಾಂತಮ್ಮ ಎಂಬುವವರ ಮನೆಗೆ ನುಗ್ಗಿ ಅವರ ಮನೆಯಲ್ಲೂ 85 ಸಾವಿರ ನಗದು, ಚಿನ್ನಾಭರಣಗಳನ್ನ ದೋಚಿದ್ರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

3 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

3 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

6 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

9 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

10 hours ago