ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇನ್ನೂ ಚೇತನ್ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ನಿವಾಸಿ, ಅಭಿಷೇಕ್ ಮೂಲತಃ ಮಂಡ್ಯ ಜಿಲ್ಲೆಯವ. ಇಬ್ಬರೂ ಒಂದೇ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದರಿಂದ ಸ್ನೇಹಿತರಾಗಿದ್ದಾರೆ. ಇಬ್ಬರಿಗೂ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ ಇತ್ತಂತೆ. ಆದ್ರೆ ಕೈಯಲ್ಲಿ ದುಡ್ಡಿಲ್ಲ, ಇದಕ್ಕಾಗಿ ಇಬ್ಬರು ಪ್ಲ್ಯಾನ್ ಮಾಡಿ ಚಿಕ್ಕಬಳ್ಳಾಪುರ ನಗರದ ಚೇತನ್ ಮನೆ ಪಕ್ಕದಲ್ಲೇ ಇರುವ ಮನೆಗಳಿಗೆ ಕನ್ನ ಹಾಕಿದ್ದರು.
ಚಾಮರಾಜಪೇಟೆಯ ಶಿಕ್ಷಕಿ ವಿನುತಾ ಹಾಗೂ ಶಾಂತಮ್ಮ ಎಂಬುವವರ ಮನೆಗಳಿಗೆ ನುಗ್ಗಿ ಚಿನ್ನಾಭರಣ ಸೇರಿ ಲಕ್ಷಾಂತರ ರೂಪಾಯಿ ನಗದು ದೋಚಿ ಇಬ್ಬರು ಮೋಜು ಮಸ್ತಿ ಮಾಡಿದ್ರು. ಆದರೆ ಈಗ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಅಂದಹಾಗೆ ಚೇತನ್ ಹಾಗೂ ಅಭಿಷೇಕ್ ಮೊದಲು ವಿನುತಾ ಅವರ ಮನೆಗೆ ನುಗ್ಗಿ ಮನೆಯ ಬಿರುವಿನಿಲ್ಲಿದ್ದ ಸರಿಸುಮಾರು 6 ಲಕ್ಷ 25 ಸಾವಿರ ಮೌಲ್ಯದ ಚಿನ್ನಾಭರಣಗಳನ್ನ ದೋಚಿದ್ರು. ತದನಂತರ ಇದೇ ಚಾಮರಾಜಪೇಟೆಯಲ್ಲಿ ಶಾಂತಮ್ಮ ಎಂಬುವವರ ಮನೆಗೆ ನುಗ್ಗಿ ಅವರ ಮನೆಯಲ್ಲೂ 85 ಸಾವಿರ ನಗದು, ಚಿನ್ನಾಭರಣಗಳನ್ನ ದೋಚಿದ್ರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…