ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇನ್ನೂ ಚೇತನ್ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ನಿವಾಸಿ, ಅಭಿಷೇಕ್ ಮೂಲತಃ ಮಂಡ್ಯ ಜಿಲ್ಲೆಯವ. ಇಬ್ಬರೂ ಒಂದೇ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದರಿಂದ ಸ್ನೇಹಿತರಾಗಿದ್ದಾರೆ. ಇಬ್ಬರಿಗೂ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ ಇತ್ತಂತೆ. ಆದ್ರೆ ಕೈಯಲ್ಲಿ ದುಡ್ಡಿಲ್ಲ, ಇದಕ್ಕಾಗಿ ಇಬ್ಬರು ಪ್ಲ್ಯಾನ್‌ ಮಾಡಿ ಚಿಕ್ಕಬಳ್ಳಾಪುರ ನಗರದ ಚೇತನ್ ಮನೆ ಪಕ್ಕದಲ್ಲೇ ಇರುವ ಮನೆಗಳಿಗೆ ಕನ್ನ ಹಾಕಿದ್ದರು.

ಚಾಮರಾಜಪೇಟೆಯ ಶಿಕ್ಷಕಿ ವಿನುತಾ ಹಾಗೂ ಶಾಂತಮ್ಮ ಎಂಬುವವರ ಮನೆಗಳಿಗೆ ನುಗ್ಗಿ ಚಿನ್ನಾಭರಣ ಸೇರಿ ಲಕ್ಷಾಂತರ ರೂಪಾಯಿ ನಗದು ದೋಚಿ ಇಬ್ಬರು ಮೋಜು ಮಸ್ತಿ ಮಾಡಿದ್ರು. ಆದರೆ ಈಗ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಅಂದಹಾಗೆ ಚೇತನ್ ಹಾಗೂ ಅಭಿಷೇಕ್ ಮೊದಲು ವಿನುತಾ ಅವರ ಮನೆಗೆ ನುಗ್ಗಿ ಮನೆಯ ಬಿರುವಿನಿಲ್ಲಿದ್ದ ಸರಿಸುಮಾರು 6 ಲಕ್ಷ 25 ಸಾವಿರ ಮೌಲ್ಯದ ಚಿನ್ನಾಭರಣಗಳನ್ನ ದೋಚಿದ್ರು. ತದನಂತರ ಇದೇ ಚಾಮರಾಜಪೇಟೆಯಲ್ಲಿ ಶಾಂತಮ್ಮ ಎಂಬುವವರ ಮನೆಗೆ ನುಗ್ಗಿ ಅವರ ಮನೆಯಲ್ಲೂ 85 ಸಾವಿರ ನಗದು, ಚಿನ್ನಾಭರಣಗಳನ್ನ ದೋಚಿದ್ರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

59 minutes ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

17 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago