ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇನ್ನೂ ಚೇತನ್ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ನಿವಾಸಿ, ಅಭಿಷೇಕ್ ಮೂಲತಃ ಮಂಡ್ಯ ಜಿಲ್ಲೆಯವ. ಇಬ್ಬರೂ ಒಂದೇ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದರಿಂದ ಸ್ನೇಹಿತರಾಗಿದ್ದಾರೆ. ಇಬ್ಬರಿಗೂ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ ಇತ್ತಂತೆ. ಆದ್ರೆ ಕೈಯಲ್ಲಿ ದುಡ್ಡಿಲ್ಲ, ಇದಕ್ಕಾಗಿ ಇಬ್ಬರು ಪ್ಲ್ಯಾನ್ ಮಾಡಿ ಚಿಕ್ಕಬಳ್ಳಾಪುರ ನಗರದ ಚೇತನ್ ಮನೆ ಪಕ್ಕದಲ್ಲೇ ಇರುವ ಮನೆಗಳಿಗೆ ಕನ್ನ ಹಾಕಿದ್ದರು.
ಚಾಮರಾಜಪೇಟೆಯ ಶಿಕ್ಷಕಿ ವಿನುತಾ ಹಾಗೂ ಶಾಂತಮ್ಮ ಎಂಬುವವರ ಮನೆಗಳಿಗೆ ನುಗ್ಗಿ ಚಿನ್ನಾಭರಣ ಸೇರಿ ಲಕ್ಷಾಂತರ ರೂಪಾಯಿ ನಗದು ದೋಚಿ ಇಬ್ಬರು ಮೋಜು ಮಸ್ತಿ ಮಾಡಿದ್ರು. ಆದರೆ ಈಗ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಅಂದಹಾಗೆ ಚೇತನ್ ಹಾಗೂ ಅಭಿಷೇಕ್ ಮೊದಲು ವಿನುತಾ ಅವರ ಮನೆಗೆ ನುಗ್ಗಿ ಮನೆಯ ಬಿರುವಿನಿಲ್ಲಿದ್ದ ಸರಿಸುಮಾರು 6 ಲಕ್ಷ 25 ಸಾವಿರ ಮೌಲ್ಯದ ಚಿನ್ನಾಭರಣಗಳನ್ನ ದೋಚಿದ್ರು. ತದನಂತರ ಇದೇ ಚಾಮರಾಜಪೇಟೆಯಲ್ಲಿ ಶಾಂತಮ್ಮ ಎಂಬುವವರ ಮನೆಗೆ ನುಗ್ಗಿ ಅವರ ಮನೆಯಲ್ಲೂ 85 ಸಾವಿರ ನಗದು, ಚಿನ್ನಾಭರಣಗಳನ್ನ ದೋಚಿದ್ರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…