ಇಬ್ಬರು ಪ್ರಾಣ ಸ್ನೇಹಿತರ ನಡುವೆ ಜಮೀನು ಗಲಾಟೆ: ಎಣ್ಣೆ ಕುಡಿಸಿ ಪ್ರಾಣ ಸ್ನೇಹಿತನ ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಜೀವ ತೆಗೆದ ಗೆಳೆಯರು: ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ಪರಾರಿ: ಒಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯೊಬ್ಬನನ್ನು ಚಿಕ್ಕಬಳ್ಳಾಪುರ  ಜಿಲ್ಲೆಯ ಪಾತಪಾಳ್ಯ ಠಾಣಾ ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ. ಇನ್ನೊಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಂಧ್ರಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎಂಬಾತ ಕಾಣೆಯಾಗಿದ್ದನು, ಈ ಬಗ್ಗೆ ವೆಂಕಟರಮಣನ ತಂದೆ ಜನವರಿ 7 ರಂದು ಸತ್ಯ ಸಾಯಿ ಜಿಲ್ಲಾ ಅಮ್ಮಡಗೂರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ವೆಂಕಟರಮಣನ ಸ್ನೇಹಿತರಾದ ಸ್ವಗ್ರಾಮದ ಬಾಬು ಮತ್ತು ಪ್ರಭಾಕರ್ ಮೇಲೆ ಅನುಮಾನ ಬಂದಿತ್ತು. ಮೃತನ ಸ್ನೇಹಿತ ಬಾಬುನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ವೆಂಕಟರಮಣನನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ಕೊಂದು ಶವ ಸುಟ್ಟು ಹಾಕಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಬಗ್ಗೆ ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವೆಂಕಟರಮಣ ನಾಯ್ಕ ಕೊಲೆಗೆ ಕಾರಣ?

ವೆಂಕಟರಮಣ ನಾಯ್ಕ, ಬಾಬು, ಪ್ರಭಾಕರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ್ ಪದೇಪದೆ ಕ್ಯಾತೆ ತೆಗೆಯುತ್ತಿದ್ದನಂತೆ. ಇದರಿಂದ ಕುಪಿತನಾದ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ ಮಾಡಿದ ಸ್ಥಳ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ, ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

9 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

14 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

16 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

18 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

20 hours ago