ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯೊಬ್ಬನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪಾತಪಾಳ್ಯ ಠಾಣಾ ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ. ಇನ್ನೊಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ವೇಳೆ ವೆಂಕಟರಮಣನನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ಕೊಂದು ಶವ ಸುಟ್ಟು ಹಾಕಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.
ಈ ಬಗ್ಗೆ ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ವೆಂಕಟರಮಣ ನಾಯ್ಕ, ಬಾಬು, ಪ್ರಭಾಕರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ್ ಪದೇಪದೆ ಕ್ಯಾತೆ ತೆಗೆಯುತ್ತಿದ್ದನಂತೆ. ಇದರಿಂದ ಕುಪಿತನಾದ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆ ಮಾಡಿದ ಸ್ಥಳ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ, ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…