ಇಬ್ಬರು ಪ್ರಾಣ ಸ್ನೇಹಿತರ ನಡುವೆ ಜಮೀನು ಗಲಾಟೆ: ಎಣ್ಣೆ ಕುಡಿಸಿ ಪ್ರಾಣ ಸ್ನೇಹಿತನ ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಜೀವ ತೆಗೆದ ಗೆಳೆಯರು: ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ಪರಾರಿ: ಒಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯೊಬ್ಬನನ್ನು ಚಿಕ್ಕಬಳ್ಳಾಪುರ  ಜಿಲ್ಲೆಯ ಪಾತಪಾಳ್ಯ ಠಾಣಾ ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ. ಇನ್ನೊಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಂಧ್ರಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎಂಬಾತ ಕಾಣೆಯಾಗಿದ್ದನು, ಈ ಬಗ್ಗೆ ವೆಂಕಟರಮಣನ ತಂದೆ ಜನವರಿ 7 ರಂದು ಸತ್ಯ ಸಾಯಿ ಜಿಲ್ಲಾ ಅಮ್ಮಡಗೂರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ವೆಂಕಟರಮಣನ ಸ್ನೇಹಿತರಾದ ಸ್ವಗ್ರಾಮದ ಬಾಬು ಮತ್ತು ಪ್ರಭಾಕರ್ ಮೇಲೆ ಅನುಮಾನ ಬಂದಿತ್ತು. ಮೃತನ ಸ್ನೇಹಿತ ಬಾಬುನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ವೆಂಕಟರಮಣನನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ಕೊಂದು ಶವ ಸುಟ್ಟು ಹಾಕಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಬಗ್ಗೆ ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವೆಂಕಟರಮಣ ನಾಯ್ಕ ಕೊಲೆಗೆ ಕಾರಣ?

ವೆಂಕಟರಮಣ ನಾಯ್ಕ, ಬಾಬು, ಪ್ರಭಾಕರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ್ ಪದೇಪದೆ ಕ್ಯಾತೆ ತೆಗೆಯುತ್ತಿದ್ದನಂತೆ. ಇದರಿಂದ ಕುಪಿತನಾದ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ ಮಾಡಿದ ಸ್ಥಳ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ, ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

8 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

5 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

7 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

7 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

11 hours ago