ಇಬ್ಬರು ಪ್ರಾಣ ಸ್ನೇಹಿತರ ನಡುವೆ ಜಮೀನು ಗಲಾಟೆ: ಎಣ್ಣೆ ಕುಡಿಸಿ ಪ್ರಾಣ ಸ್ನೇಹಿತನ ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಜೀವ ತೆಗೆದ ಗೆಳೆಯರು: ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ಪರಾರಿ: ಒಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯೊಬ್ಬನನ್ನು ಚಿಕ್ಕಬಳ್ಳಾಪುರ  ಜಿಲ್ಲೆಯ ಪಾತಪಾಳ್ಯ ಠಾಣಾ ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ. ಇನ್ನೊಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಂಧ್ರಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎಂಬಾತ ಕಾಣೆಯಾಗಿದ್ದನು, ಈ ಬಗ್ಗೆ ವೆಂಕಟರಮಣನ ತಂದೆ ಜನವರಿ 7 ರಂದು ಸತ್ಯ ಸಾಯಿ ಜಿಲ್ಲಾ ಅಮ್ಮಡಗೂರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ವೆಂಕಟರಮಣನ ಸ್ನೇಹಿತರಾದ ಸ್ವಗ್ರಾಮದ ಬಾಬು ಮತ್ತು ಪ್ರಭಾಕರ್ ಮೇಲೆ ಅನುಮಾನ ಬಂದಿತ್ತು. ಮೃತನ ಸ್ನೇಹಿತ ಬಾಬುನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ವೆಂಕಟರಮಣನನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ಕೊಂದು ಶವ ಸುಟ್ಟು ಹಾಕಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಬಗ್ಗೆ ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವೆಂಕಟರಮಣ ನಾಯ್ಕ ಕೊಲೆಗೆ ಕಾರಣ?

ವೆಂಕಟರಮಣ ನಾಯ್ಕ, ಬಾಬು, ಪ್ರಭಾಕರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ್ ಪದೇಪದೆ ಕ್ಯಾತೆ ತೆಗೆಯುತ್ತಿದ್ದನಂತೆ. ಇದರಿಂದ ಕುಪಿತನಾದ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ ಮಾಡಿದ ಸ್ಥಳ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ, ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

8 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

14 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

16 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago