ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯೊಬ್ಬನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪಾತಪಾಳ್ಯ ಠಾಣಾ ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ. ಇನ್ನೊಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ವೇಳೆ ವೆಂಕಟರಮಣನನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ನಿರ್ಜನ ಪ್ರದೇಶದಲ್ಲಿ ಕೊಂದು ಶವ ಸುಟ್ಟು ಹಾಕಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.
ಈ ಬಗ್ಗೆ ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ವೆಂಕಟರಮಣ ನಾಯ್ಕ, ಬಾಬು, ಪ್ರಭಾಕರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ್ ಪದೇಪದೆ ಕ್ಯಾತೆ ತೆಗೆಯುತ್ತಿದ್ದನಂತೆ. ಇದರಿಂದ ಕುಪಿತನಾದ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆ ಮಾಡಿದ ಸ್ಥಳ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ, ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…