ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ; ಒಬ್ಬ ಅಪ್ರಾಪ್ತ ಸೇರಿ ಮೂರು ಮಂದಿ ಆರೋಪಿಗಳ ಬಂಧನ; ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿಕೆ

ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನ ಹಾಗೂ ಒಬ್ಬ ಬಾಲಕ ಸೇರಿದಂತೆ ಮೂರು ಜನರನ್ನು ಬಂಧಿಸಿ ನಗರದ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತ ಅಪ್ರಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೊಡ್ಡಬೆಳವಂಗಲದ ಜೋಡಿ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಫೆ.17 ರಂದು ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಅಮಾಯಕ‌ ಯುವಕರಿಗೆ ಹಾಡಹಗಲೇ ಚಾಕು ಇರಿದು ಹತ್ಯೆ ಮಾಡಲಾಗಿತ್ತು.

ಪ್ರಕರಣದಲ್ಲಿ ಭಾಗಿಯಾದ್ದ ಪ್ರಮುಖ ಆರೋಪಿಗಳಿಬ್ಬರನ್ನು ಫೆ.19ರಂದು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿತ್ತು. ಫೆ.22ರಂದು ಒಬ್ಬ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ.

ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನಾ ಹಾಗೂ ಒಬ್ಬ ಬಾಲಕ ಸೇರಿ ಮೂರು ಜನರನ್ನು ಫೆ.25ರಂದು ಬಂಧಿಸಿ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ.

ಒಟ್ಟಾರೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಬಂಧಿತರ ಪೈಕಿ ಒಬ್ಬಾತ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

3 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

6 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

16 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

17 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

20 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

22 hours ago